ಚನ್ನಪಟ್ಟಣ ಓವರ್ ಹೆಡ್ ಟ್ಯಾಕ್ʼನಲ್ಲಿ ಮಹಿಳೆ ಶವ ಪತ್ತೆ: ಅಧಿಕಾರಿಗಳಿಗೆ ಹೆಚ್ಡಿಕೆ ತರಾಟೆ!
ಚನ್ನಪಟ್ಟಣದ ಹೊಸ ಕೋರ್ಟ್ ಹಿಂಭಾಗದಲ್ಲಿರುವ ಓವರ್ ಹೆಡ್ ಟ್ಯಾಕ್ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುದ್ದಿ ತಿಳಿದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳ ಜತೆ ದೂರವಾಣಿಯಲ್ಲಿ ಮಾತನಾಡಿದ ಕ್ಷೇತ್ರದ ಶಾಸಕರೂ ಆದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೂಡಲೇ ಟ್ಯಾಂಕರ್ʼಗಳ ಮೂಲಕ ಜನರಿಗೆ ನೀರು ಪೂರೈಕೆ ಮಾಡುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, “ಈಗಾಗಲೇ ನಾನು ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಅದೇ ರೀತಿ ನಗರಸಭೆ ಅಧಿಕಾರಿಗಳ ಜತೆಗೂ ಮಾತನಾಡಿ, ಜನರ ಕುಡಿಯುವ ಮತ್ತು ದಿನಬಳಕೆ ನೀರಿನ ಪರ್ಯಾಯ ವ್ಯವಸ್ಥೆ ಮಾಡುವಂತೆ ಹೇಳಿದ್ದೇನೆ” ಎಂದರು.
ಓವರ್ ಹೆಡ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಿ, ಆ ನಂತರ ಅದರ ಸ್ವಚ್ಛತೆ ಖಾತರಿಪಡಿಸಿಕೊಂಡ ನಂತರ ಅಧಿಕಾರಿಗಳು ಅಧಿಕೃತವಾಗಿ ಹೇಳುವ ತನಕ ಯಾರೂ ಆ ಟ್ಯಾಂಕಿನ ನೀರನ್ನು ಬಳಸಬಾರದು ಎಂದು ಅವರು ಜನರಲ್ಲಿ ಹೆಚ್ಡಿಕೆ ಅವರು ಮನವಿ ಮಾಡಿದ್ದಾರೆ.