ದಿಢೀರ್ ಈರುಳ್ಳಿ ಬೆಲೆ ಕುಸಿತ ಹಿನ್ನೆಲೆ : ಎಪಿಎಂಸಿ ಈರುಳ್ಳಿ ಮಾರುಕಟ್ಟೆಯಲ್ಲಿ ರೈತರ ಪ್ರತಿಭಟನೆ
ದಿಢೀರ್ ಈರುಳ್ಳಿ ಬೆಲೆ ಕುಸಿತ ಹಿನ್ನೆಲೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಎಪಿಎಂಸಿ ಈರುಳ್ಳಿ ಮಾರುಕಟ್ಟೆಯಲ್ಲಿ ರೈತರ ಪ್ರತಿಭಟನೆ ನಡೆಸುತ್ತಿದ್ದಾರೆ.
ನಿನ್ನೆ 2600 ರುಪಾಯಿಯಿಂದ 3000 ರುಪಾಯಿವರೆಗೆ ಮಾರಾಟವಾಗಿದ್ದ ಈರುಳ್ಳಿ, ಇಂದು ಕೇವಲ 600 ರುಪಾಯಿಯಿಂದ 1300 ರುಪಾಯಿಗೆ ಕುಸಿದಿದೆ. ದರ ಕುಸಿತದಿಂದ ಕಂಗಾಲಾದ ರೈತರು ದಲ್ಲಾಳಿಗಳು,ಎಪಿಎಂಸಿ ಅಧಿಕಾರಿಗಳ ವಿರುದ್ಧ ಕಿಡಿ ಕಾರುತ್ತಿದ್ದಾರೆ.