ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಹಿನ್ನೆಲೆ : ಹಾಸನಾಂಬೆ ದರ್ಶನ ಪಡೆದ ಅನರ್ಹ ಶಾಸಕ
ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಹಿನ್ನೆಲೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ ಹಾಸನಾಂಬೆ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ನಾರಾಯಣಗೌಡ ಅವರು ಶಕ್ತಿದೇವತೆ ಆಶೀರ್ವಾದ ಪಡೆದರು.
ಹಾಸನಾಂಬೆ ದರ್ಶನ ಬಳಿಕ ಮಾತನಾಡಿದ ಅನರ್ಹ ಶಾಸಕ ನಾರಾಯಣಗೌಡ, ಇಂದು ಸುಪ್ರೀಂಕೋರ್ಟ್ ನಲ್ಲಿ ಅಂತಿಮ ವಿಚಾರಣೆ ಇದೆ. ತಾಯಿಯ ಆಶೀರ್ವಾದ ಬೇಡಿದ್ದೇನೆ, ಎಲ್ಲವೂ ಸರಿಯಾಗುವ ನಂಬಿಕೆ ಇದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲಾ ಅನರ್ಹ ಶಾಸಕರಿಗೆ ಬಿಜೆಪಿ ಟಿಕೇಟ್ ವಿಚಾರವಾಗಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ತಮ್ಮ ಬೆಂಬಲಿಗರು ಹಿತೈಷಿಗಳ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತೇನೆ. ಯಾವುದೂ ಇನ್ನೂ ಅಂತಿಮವಾಗಿಲ್ಲ, ಕೋರ್ಟ್ ತೀರ್ಪಿನ ಬಳಿಕ ಎಲ್ಲವೂ ಅಂತಿಮವಾಗಲಿದೆ ಎಂದರು.