ಎಲ್ಲರ ಎದುರೇ ಕಾಂಗ್ರೆಸ್ ಕಾರ್ಯಕರ್ತನ ಕೆನ್ನೆಗೆ ಬಾರಿಸಿದ ಸಿದ್ದರಾಮಯ್ಯ….
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕರ್ತನಿಗೆ ಎಲ್ಲರ ಎದುರೇ ಕೆನ್ನೆಗೆ ಬಾರಿಸಿದ ಘಟನೆ ಮೈಸೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂದು ಸಿದ್ದರಾಮಯ್ಯ ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ ಹೆಚ್.ಎ.ಎಲ್ ವಿಶೇಷ ವಿಮಾನ ನಿಲ್ದಾಣದ ಮೂಲಕ ಮೈಸೂರಿಗೆ ತೆರಳಿದ್ದರು. ಈ ವೇಳೆ ಅವರು ಮಾಧ್ಯಮದ ಜೊತೆ ಮಾತನಾಡಿದ ನಂತರ ಕೆನ್ನೆಗೆ ಸಿದ್ದು ಬಾರಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬುವರು ಯಾವುದೋ ವ್ಯಕ್ತಿಗೆ ಕರೆ ಮಾಡಿದ್ದರು. ಬಳಿಕ ಸಿದ್ದರಾಮಯ್ಯ ಅವರಿಗೆ ಮೊಬೈಲ್ ನೀಡಲು ಮುಂದಾಗಿದ್ದರು. ಈ ವೇಳೆ ಸಿದ್ದರಾಮಯ್ಯ ನಾನು ಮಾತನಾಡುವುದಿಲ್ಲ ಹೋಗು ಎಂದು ರವಿ ಕೆನ್ನೆಗೆ ಬಾರಿಸಿದ್ದಾರೆ.