ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ನಾಳೆಯೂ ರಾಮನಗರ ಬಂದ್..
ಅಕ್ರಮ ಹಣ ಸಂಗ್ರಹ ಪ್ರಕರಣದಲ್ಲಿ ಅರೆಸ್ಟ್ ಆದ ಡಿ.ಕೆ.ಶಿವಕುಮಾರ್ ಬಿಡುಗಡೆ ಮಾಡುವಂತೆ ಆಗ್ರಹಿಸಿ ಧಾರವಾಡ, ಕಾರವಾರ, ಉಡುಪಿ, ಮಂಗಳೂರು, ಮಂಡ್ಯ, ಬಳ್ಳಾರಿ, ಆನೆಕಲ್, ಚಿಕ್ಕಬಳ್ಳಾಪುರ, ರಾಮನಗರ, ಬ್ರೆಗೇಡ್ ರೋಡ್ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಸ್ ಗೆ ಬೆಂಕಿ ಹಚ್ಚಿ ರಸ್ತೆ ತಡೆದು ಪ್ರತಿಭಣಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ಬಂಧನ ಖಂಡಿಸಿ ನಾಳೆಯೂ ರಾಮನಗರ ಬಂದ್ ಗೆ ಕರೆ ನೀಡಲಾಗಿದೆ.
ಡಿಕೆಶಿ ಬಂಧನ ಖಂಡಿಸಿ ಇಂದು ರಾಜ್ಯಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ರಾಮನಗರ ಬಂದ್ ಮಾಡಲಾಗಿದೆ. ನಾಳೆಯೂ ಸಹ ಬಂದ್ ಮುಂದುವರೆಯಲಿದೆ ಎಂದು ಮಾಜಿ ಶಾಸಕ ಬಾಲಕೃಷ್ಣ ತಿಳಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಬಂಧನ ರಾಜಕೀಯ ಪಿತೂರಿ ಎಂದು ಆರೋಪಿಸಿದ್ದಾರೆ. ನಾಳೆಯೂ ಬಂದ್ ಗೆ ಕರೆ ನೀಡಿದ್ದೇವೆ ಎಂದು ಮಾಜಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ.