ಕೃಷ್ಣಜನ್ಮಾಷ್ಠಮಿ ಸಂದರ್ಭದಲ್ಲಿ ಭೋಜ್ಪುರಿ ಹಾಡಿಗೆ ನೃತ್ಯ….

ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಆರ್ಕೆಸ್ಟ್ರಾ ಕಲಾವಿದರನ್ನು ಕರೆಯಿಸಿ ಅಶ್ಲೀಲ ಡಾನ್ಸ್ ಮಾಡಿಸಲಾಗಿದೆ. ಕೃಷ್ಣಜನ್ಮಾಷ್ಠಮಿ ಸಂದರ್ಭದಲ್ಲಿ ಭೋಜ್ಪುರಿ ಹಾಡಿಗೆ ನೃತ್ಯ ಮಾಡಲಾಗಿದೆ. ಕಲಾವಿದರಿಗೆ ನೋಟುಗಳನ್ನು ಎಸೆಯಲಾಗಿದೆ.

ಮಿರ್ಜಾಪುರದ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಅಶ್ಲೀಲ ಫೋಟೋ, ವಿಡಿಯೋ ವೈರಲ್ ಆಗಿರುವ ಬಗ್ಗೆ ಸುದ್ದಿ ಸಿಕ್ಕಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ತನಿಖೆ ನಂತ್ರ ಸೂಕ್ತ ಕ್ರಮಕೈಗೊಳ್ಳುವುದಾಗಿ ಅವ್ರು ಹೇಳಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಜನ್ಮಾಷ್ಠಮಿಯನ್ನು ಆಯೋಜನೆ ಮಾಡಲಾಗಿತ್ತು. ಭವ್ಯ ವೇದಿಕೆ ನಿರ್ಮಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜನರು ಹುಡುಗಿಯರ ಜೊತೆ ಡಾನ್ಸ್ ಮಾಡುತ್ತಿದ್ದಾರೆ. ಕಾರ್ಯಕ್ರಮ ತಡರಾತ್ರಿಯವರೆಗೆ ನಡೆದಿದೆ. ಇದನ್ನು ವಿಡಿಯೋ ಮಾಡಿದ ಜನರು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights