ಗ್ರಾಮಕ್ಕೆ‌ ಕುಡಿಯುವ ನೀರು ಪೂರೈಸುವ ವೇಳೆ ವಿದ್ಯುತ್ ತಗುಲಿ ವ್ಯಕ್ತಿ ಸಾವು…!

ವಿದ್ಯುತ್ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೊಕಿನ ಅಗ್ರಹಾರ ಮುಚಡಿ ಗ್ರಾಮದಲ್ಲಿ ನಡೆದಿದೆ.

ಮಲ್ಲೇಶಪ್ಪ ಹಾಲಪ್ಪ ಮಜ್ಜಿಗೇರ (62) ಮೃತ ದುರ್ದೈವಿ. ಮೃತ  ಮಲ್ಲೇಶಪ್ಪ ಹಾಲಪ್ಪ ಮಜ್ಜಿಗೇರ ನೀರಗಂಟಿ ಕೆಲಸ ಮಾಡುತ್ತಿದ್ದರು.  ಇಂದು ಬೆಳಗ್ಗೆ ಗ್ರಾಮಕ್ಕೆ‌ ಕುಡಿಯುವ ನೀರು ಪೂರೈಸುವ ಸಂಬಂಧ ಮೋಟಾರ್ ಸ್ಟಾರ್ಟ್ ಮಾಡುವ ವೇಳೆ ಘಟನೆ ಸಂಭವಿಸಿದೆ.

ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights