ಡಿಕೆಶಿ ಬಂಧನ ಖಂಡಿಸಿ ಸಿಎಂ ಹುಟ್ಟೂರಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ….
ಡಿಕೆಶಿ ಬಂಧನ ಖಂಡಿಸಿ ಸಿಎಂ ಹುಟ್ಟೂರಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಬೂಕನಕೆರೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವ್ರ ಹುಟ್ಟೂರು.
ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಂದ ಮೋದಿ, ಅಮಿತ್ ಶಾ ಪ್ರತಿಕೃತಿ ದಹಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಇಡಿ, ಐಟಿಯನ್ನು ಬಳಸಿಕೊಂಡು ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ರಾಜಕೀಯ ದುರುದ್ದೇಶದಿಂದ ಡಿ.ಕೆ.ಶಿವಕುಮಾರ್ ಅವರನ್ನ ಬಂಧಿಸಲಾಗಿದೆ.
ಕೂಡಲೇ ಅವರನ್ನು ಬಿಡಬೇಕೆಂದು ಆಗ್ರಹಿಸಿ, ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.