ನಗರಸಭೆ ಅಧಿಕಾರಿಗಳ ನಿರ್ಲಕ್ಷ : ಖುದ್ದು ರಸ್ತೆ ಗುಂಡಿಗಳನ್ನು ಮುಚ್ಚಿದ ಪೊಲೀಸರು
ನಗರಸಭೆ ಅಧಿಕಾರಿಗಳ ನಿರ್ಲಕ್ಷ ಧೋರಣೆಗೆ ಬೇಸತ್ತು ಪೊಲೀಸರೇ ಖುದ್ದು ರಸ್ತೆ ಗುಂಡಿಗಳನ್ನು ಮುಚ್ಚಿ ಕರ್ತವ್ಯದ ಜೊತೆಗೆ ಸಾಮಾಜಿಕ ಕಳಕಳಿ ಮೇರೆದ ಘಟನೆ ರಾಯಚೂರಿನಲ್ಲಿ ನಡೆದಿದೆ.
ನಗರದ ಗಂಜ್ ಬಳಿಯ ಆರ್ ಡಿಸಿಸಿ ( ರಾಯಚೂರು ಕೋ ಆಪರೇಟಿವ್) ಬ್ಯಾಂಕ್ ಮುಂಭಾಗದ ಮುಖ್ಯ ರಸ್ತೆಯಲ್ಲಿ ಆಳುದ್ದ ಗುಂಡಿ ಬಿದ್ದು ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದರು. ರಸ್ತೆಯಲ್ಲಿ ಮಾರುದ್ದ ಗುಂಡಿ ಬಿದ್ದು ತಿಂಗಳುಗಳೇ ಕಳೆದಿದ್ರು, ನಗರಸಭೆ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಅಲ್ಲದೆ ಗುಂಡಿಗಳನ್ನು ಮುಚ್ಚುವಂತೆ ಸಾರ್ವಕನಿಕರು, ಪೊಲೀಸರು ಹಲವಾರು ಸಲ ಮನವಿ ಮಾಡಿದ್ರು ತಲೆಕೆಡಿಸಿಕೊಂಡಿರಲಿಲ್ಲ.
ಹೀಗಾಗಿ ಟ್ರಾಫಿಕ್ ಪೊಲೀಸರೇ ಖುದ್ದು ಜೆಸಿಬಿ ಬಳಸಿಕೊಂಡು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಟ್ರಾಫೀಕ್ ಪೊಲೀಸರ ಸಾಮಾಜಿಕ ಕಳಕಳಿಗೆ ಭೇಶ್ ಎನ್ನುತ್ತಿರುವ ವಾಹನ ಸವಾರರು, ಸಾರ್ವಜನಿಕರು ನಗರಸಭೆ ಅಧಿಕಾರಿಗಳ ವರ್ತನೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೊಲೀಸರ ಸಾಮಾಜಿಕ ಕಳಕಳಿ ಆದ್ರು ನೋಡಿ ನಾಚಿಕೆ ಇಂದಾದ್ರು ಇನ್ಮುಂದೆ ರಸ್ತೆ ಗುಂಡಿಗಳನ್ನು ಮಚ್ಚಿ ಅಂತಾ ಒತ್ತಾಯ ಮಾಡ್ತಿದ್ದಾರೆ.