ನಿಂತ ಲಾರಿಗೆ ಸ್ಕಾರ್ಪಿಯೋ ಢಿಕ್ಕಿ – ಸ್ಥಳದಲ್ಲಿಯೇ ಐವರ ಸಾವು

ಕಲಬುರ್ಗಿ ನಿಂತಿದ್ದ ಲಾರಿಗೆ ಸ್ಕಾರ್ಪಿಯೋ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮುವ್ವರು ಸೇರಿ ಐದು ಜನ ಸಾವನ್ನಪ್ಪಿದ ಘಟನೆ ಕಲಬುರ್ಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ನಡೆದಿದೆ. ಮೃತರೆಲ್ಲರೂ ದಕ್ಷಿಣ ಸೋಲಾಪುರ ತಾಲೂಕಿನ ಚಿಂಚಪುರ ನಿವಾಸಿಗಳಾಗಿದ್ದಾರೆ. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ತೀರ್ಥಯಾತ್ರೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಶ್ರಾವಣ ಮಾಸದ ಹಿನ್ನೆಲೆಯಲ್ಲಿ ತೀರ್ಥಯಾತ್ರೆ ಕೈಗೊಂಡವರು ಮಸಣ ಸೇರಿದ ಘಟನೆ ಕಲಬುರ್ಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ನಡೆದಿದೆ. ನಿಂತ ಲಾರಿಗೆ ಸ್ಕಾರ್ಪಿಯೋ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳೂ ಸೇರಿ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮುವ್ವರು ಗಾಯಗೊಂಡಿದ್ದರು. ಮೃತರ ಪೈಕಿ ಮುವ್ವರು ಒಂದೇ ಕುಟುಂಬಕ್ಕೆ ಸೇರಿದ್ದಾರೆ. ತಿರುಪತಿಯಿಂದ ಸೋಲಾಪುರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮೃತರನ್ನು ಚಿಂಚಪುರದ ಸಂಜಯ್ ಚಡಚಣ(32), ಆತನ ಪತ್ನಿ ರಾಣಿ ಚಡಚಣ(23), ಪುತ್ರ ಶ್ರೇಯಸ್(3), ಭಾಗ್ಯಶ್ರೀ ಆಳಗಿ(19) ಹಾಗೂ ಧೀರಜ್ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಂತ ಲಾರಿಗೆ ಢಿಕ್ಕಿ ಹೊಡೆದಾಗ ದುರ್ಘಟನೆ ಸಂಭವಿಸಿದೆ. ಅಪಘಾತಕ್ಕೀಡಾದ ವಾಹನದಲ್ಲಿ ಎಂಟು ಜನರಿದ್ದರು. ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಚಾಲಕ, ಒಂದು ಮಗು ಹಾಗೂ ಓರ್ವ ಮಹಿಳೆಗೆ ಗಾಯಗಳಾಗಿವೆ ಎಂದು ಮೃತನ ಸಂಬಂಧಿಗಳು ತಿಳಿಸಿದ್ದಾರೆ.

ಶ್ರಾವಣ ಮಾಸದ ಹಿನ್ನೆಲೆಯಲ್ಲಿ 11 ಮಕ್ಕಳೂ ಸೇರಿ 27 ಜನ ನಾಲ್ಕು ವಾಹನಗಳಲ್ಲಿ ತೀರ್ಥಯಾತ್ರೆ ಕೈಗೊಂಡಿದ್ದರು. ಶ್ರೀಶೈಲ, ತಿರುಪತಿ ಇತ್ಯಾದಿಗಳ ದರ್ಶನ ಪಡೆದು ಸೋಲಾಪುರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಲಾರಿಯ ರೂಪದಲ್ಲಿ ನಿಂತಿದ್ದ ಜನರಾಯ, ಐವರನ್ನೂ ಬಲಿಪಡೆದಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಮೃತರ ಸಂಬಂಧಿಗಳು ಜಿಲ್ಲಾ ಆಸ್ಪತ್ರೆ ಬಳಿ ಜಮಾಯಿಸಿ ಕಣ್ಣೀರು ಹಾಕಿದರು. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights