ನೆರೆಯಿಂದ ಆಸ್ತಿ-ಪಾಸ್ತಿ ಕಳೆದುಕೊಂಡ ಹಿನ್ನೆಲೆ : ಮನನೊಂದು ಮತ್ತೊಬ್ಬ ರೈತ ಆತ್ಮಹತ್ಯೆ

ನೆರೆಯಿಂದ ಆಸ್ತಿ-ಪಾಸ್ತಿ ಕಳೆದುಕೊಂಡ ಹಿನ್ನೆಲೆಯಲ್ಲಿ ಮನನೊಂದು ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದಲ್ಲಿ ನಡೆದಿದೆ.

ಚಂದ್ರೇಗೌಡ(55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಮಳೆಯಿಂದ ಅರ್ಧ ಎಕರೆ ಭತ್ತದ ಗದ್ದೆ, ಅರ್ಧ ಎಕರೆ ಕಾಫಿ ತೋಟ ಹಾಳಾಗಿತ್ತು. ತೋಟ ಸರಿಪಡಿಸಲು ಕೈ ಸಾಲ ಮಾಡಿದ್ದ ರೈತ, ಸರ್ಕಾರದಿಂದ ಪರಿಹಾರ ಸಿಗದ ಹಿನ್ನೆಲೆ ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಪರಿಹಾರ ಬಂದಿಲ್ಲ ಎಂದು ಮನನೊಂದಿದ್ದ ರೈತ ಮನನೊಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights