ಬಂಧಿಸಿ ಕರೆದೊಯ್ಯುವಾಗ ಪೊಲೀಸರಿಂದ ತಪ್ಪಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆರೋಪಿ…!

ಆರೋಪಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಹಳೇ ಮಂಡಗದ್ದೆ ಬಳಿ ನಡೆದಿದೆ.

ಹೌದು… ಚಿದಂಬರ, ಪೊಲೀಸರಿಂದ ತಪ್ಪಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ.  2017ರಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿದ್ದ ಚಿದಂಬರ ಎಂಬ ಆರೋಪಿ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದು ವಿಚಾರಣೆ ನಡೆಯುತ್ತಿತ್ತು. ಈತನಿಗೆ ವಾರೆಂಟ್ ಬಂದರೂ ಕೋರ್ಟ್ ಗೆ ಹಾಜರಾಗಿರಲಿಲ್ಲ. ಹೀಗಾಗಿ ಪೊಲೀಸರು ಬಂಧಿಸಿ ಕರೆದೊಯ್ಯುವಾಗ  ಹಿಂದೆಯೇ ಓಡಿ ಹೋಗಿ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಕೂಡಲೇ ಪೊಲೀಸ್ ಪೇದೆ ಸುರೇಶ್ ಯುವಕನನ್ನು ರಕ್ಷಿಸಿ ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ. ಈತನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights