ಬಳ್ಳಾರಿ ರೆಡ್ಡಿ ಬ್ರದರ್ಸ್ ವಿರುದ್ಧ ತೊಡೆ ತಟ್ಟಿದ್ದ ಮಾಜಿ ಸಚಿವ ಅನಿಲ್ ಲಾಡ್ ಬಿಜೆಪಿಗೆ ಹೋಗ್ತಾರಾ..?
ಆಪರೇಷನ್ ಕಮಲ ಪರ್ವ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಬಳ್ಳಾರಿ ರೆಡ್ಡಿ ಬ್ರದರ್ಸ್ ವಿರುದ್ಧ ತೊಡೆ ತಟ್ಟಿದ್ದ ಮಾಜಿ ಸಚಿವ ಅನಿಲ್ ಲಾಡ್ ಬಿಜೆಪಿ ಸೇರುವ ಸನಿಹದಲ್ಲಿದ್ದಾರೆ.
ಈ ಸಂಬಂಧ ಅವರು ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದು, ಅಂದು ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ. ಈಗಾಗಲೇ, ಅನಿಲ್ ಲಾಡ್ ಅವರು ತಮ್ಮ ಒಂದು ಕಾಲದ ಬದ್ಧ ವೈರಿ ಬಿ. ಶ್ರೀರಾಮುಲು ಅವರ ಜತೆಯಲ್ಲೂ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದ್ದು, ಎಲ್ಲವೂ ಅಂದುಕೊಂಡಂತೆ ಆದಲ್ಲಿ ಲಾಡ್ ಬಿಜೆಪಿ ತೆಕ್ಕೆಗೆ ಬರುವುದು ನಿಶ್ಚಿತವಾಗಿದೆ.
ಮತ್ತೊಂದೆಡೆ, ಮಾಜಿ ಸಚಿವ ಯು.ಟಿ. ಖಾದರ್ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.