ಬಿಎಸ್ ಯಡಿಯೂರಪ್ಪನ ಪತ್ನಿಯದ್ದು ಸಹಜ ಸಾವಲ್ಲ – ಕುಮಾರಸ್ವಾಮಿ ಗಂಭೀರ ಆರೋಪ

ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರಕಾರ ಪತನವಾಗಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದಾರೆ. ನನ್ನ ಸರಕಾರ ಕೆಡವಲು ಸಿಪಿ ಯೋಗೇಶ್ವರ್ ಪ್ರಮುಖ ಪಾತ್ರ ವಹಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ರಾಜಕಾರಣ ಇರೋದೆ ಕಳ್ಳರಿಗೆ ಮಾತ್ರ, ಒಳ್ಳೆಯವರಿಗೆ ಅಲ್ಲ. ಹೀಗಾಗಿ ನಾನು ರಾಜಕೀಯದಿಂದ ದೂರ ಹೋಗುಬೇಕು ಅಂದುಕೊಂಡಿದ್ದೇನೆ ಎಂದರು.

ನಾನೇನು ಪಾಪದ ಹಣ ಸಂಪಾದನೆ ಮಾಡಿಲ್ಲ. ಜಾರಿ ನಿರ್ದೇಶನಾಲಯ, ಸಿಬಿಐಗೆ ಹೆದರುವುದಿಲ್ಲ ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ಹೇಳಿದ್ದು, ನಾನೇ ಮುಖ್ಯಮಂತ್ರಿಯಾಗಿದ್ದರೆ ಅದರ ಕಥೆಯೇ ಬೇರೆಯಾಗುತ್ತಿತ್ತು, ಆದರೆ ಜನರಿಗೆ ನನ್ನ ಮೇಲೆ ನಂಬಿಕೆ ಇರಲಿಲ್ಲ ಎಂದು ಹೇಳಿದರು.

ಬಿಎಸ್ ಯಡಿಯೂರಪ್ಪ ಅವರ ಪತ್ನಿಯದ್ದು ಸಹಜ ಸಾವಲ್ಲ ಎಂದು ಹೇಳಿಕೆ ನೀಡುವ ಮೂಲಕ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಬಿಎಸ್ ಯಡಿಯೂರಪ್ಪನವರ ಪತ್ನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಒಂದು ಅಡಿ ಇರುವ ನೀರಿನ ಸಂಪಿಗೆ ಬಿದ್ದು ಸಾಯಲು ಸಾಧ್ಯವೇ? ಇದು ಅನುಮಾನಾಸ್ಪದ ಸಾವಲ್ಲವೇ ಎಂದು ಪ್ರಶ್ನಿಸಿದರು.

 

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights