ಮನೆಯ ಮೆಟ್ಟಿಲು ಗ್ರಿಲ್ ಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ….
ಮನೆಯ ಮೆಟ್ಟಿಲು ಗ್ರಿಲ್ ಗೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯ 11ನೇ ಕ್ರಾಸ್ ನಲ್ಲಿ ನಡೆದಿದೆ.
ನವೀನ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮಾಲೂರು ತಾಲೂಕಿನ ನಾಗಲಾಪುರ ಗ್ರಾಮದ ನಿವಾಸಿಯಾಗಿದ್ದಾನೆ. ಕಳೆದ ಎರಡು ತಿಂಗಳಿನಿಂದ ಸಂಬಂದಿಕರ ಮನೆಯಲ್ಲಿ ವಾಸವಿದ್ದ ಮೃತ ಯುವಕ, ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ನೇಣು ಬಿಗಿದು ಕೊಂಡು ಆತ್ಮಹತ್ಯ ಮಾಡಿಕೊಂಡಿದ್ದಾನೆಂದು ಶಂಕಕಿಸಲಾಗಿದೆ.
ಸ್ಥಳಕ್ಕೆ ಕೋಲಾರ ನಗರಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.