ಮಾಜಿ ಸಚಿವ ಸಾರಾ ಮಹೇಶ್ ವಿರುದ್ಧ ಹೆಚ್. ವಿಶ್ವನಾಥ್ ಮತ್ತೆ ವಾಗ್ದಾಳಿ…

ಮಾಜಿ ಸಚಿವ ಸಾರಾ ಮಹೇಶ್ ವಿರುದ್ಧ  ಅನರ್ಹ ಶಾಸಕ ಹೆಚ್. ವಿಶ್ವನಾಥ್ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ.

ಇವತ್ತು ಹೆಚ್‌‌.ಡಿ.ದೇವೇಗೌಡರ ಮನೆಯವರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದರೆ ಅದಕ್ಕೆ ಸಾರಾ ಮಹೇಶ್ ಮತ್ತು ಆತನ ಕೆಲ ಸ್ನೇಹಿತರು ಕಾರಣ ಎಂದು ಕೆ.ಆರ್. ನಗರದಲ್ಲಿ ಅನರ್ಹ ಶಾಸಕ ಹೆಚ್. ವಿಶ್ವನಾಥ್  ಆರೋಪಿಸಿದ್ದಾರೆ.

ದೇವೇಗೌಡರ ಮನೆಗೆ ಇವತ್ತು ಅನ್ಯಾಯವಾಗಿದ್ದರೆ ಅದಕ್ಕೆ ಸಾರಾ ಕಾರಣ. ದೇವೇಗೌಡರ ಕಣ್ಣೀರಿಗೂ ಇವರೇ ಕಾರಣ. ಸಾರಾ ಮಹೇಶ್ ದುರಹಂಕಾರ ದಿಂದ ಒಕ್ಕಲಿಗ ಶಾಸಕರೇ ಜೆಡಿಎಸ್ ನಿಂದ ದೂರವಾದರೂ. ಇವತ್ತಿನ ದೇವೇಗೌಡರ ಈ ಸ್ಥಿತಿಗೆ ನಾವಲ್ಲ ಕಾರಣ ನೀವು. 500 ರೂಪಾಯಿ, 1 ಸಾವಿರ ರೂಪಾಯಿ ಅವರಿವರಿಗೆ ಕೊಟ್ಟುಕೊಂಡು ರಾಜಕಾರಣ ಮಾಡ್ತಿದ್ದೀರಿ. ಆದರೆ, ನನ್ನದ್ದು ಅಭಿವೃದ್ಧಿ ರಾಜಕಾರಣ. ಮೊದಲು ಸುಳ್ಳು ಹೇಳುವುದ ನಿಲ್ಲಿಸಿ. ಕೆ.ಆರ್. ನಗರದ ಅಭಿವೃದ್ಧಿಗೆ ನಾನು ಮಾಡಿದಷ್ಟು ಕೆಲಸ ನೀವು ಮಾಡಿಲ್ಲ ಎಂದು  ಸಾರಾ ಮಹೇಶ್ ವಿರುದ್ಧ ವಿಶ್ವನಾಥ್ ವಾಗ್ದಾಳಿ.

ಇದೇ ವೇಳೇ ಡಿಕೆಶಿ ಗೆ ಇಡಿ ಕಸ್ಟಡಿ ವಿಚಾರ ಮಾತನಾಡಿದ ವಿಶ್ವನಾಥ್ ಡಿಕೆಶಿ ಇದೆಲ್ಲದರಿಂದ ಬಹು ಬೇಗ ಮುಕ್ತವಾಗಿ ಹೊರ ಬರಲಿ. ಹೊರ ಬಂದು ರಾಜಕಾರಣ ಮಾಡಿಲಿ ಎಂದು ಮೈಸೂರಿನಲ್ಲಿ ಹೆಚ್. ವಿಶ್ವನಾಥ್ ಹಾರೈಸಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights