ರಾತ್ರಿ ಡ್ಯೂಟಿ ಮೇಲಿದ್ದಾಗ ಬ್ಯಾಂಕ್ ನ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆಗೆ ಯತ್ನ…!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಡ್ಯೂಟಿ ಮೇಲಿದ್ದಾಗ ಆತ್ಮಹತ್ಯೆಗೆ ಯತ್ನ ಮಾಡಿದ್ದ ರಮಜಾನ್ ಬಾಡವಾಲೆ ಎಂಬಾತ ಎರಡೂ ಕೈಗಳ ನರಗಳನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಈತನನ್ನು ತಕ್ಷಣ ಅಂಬ್ಯುಲೆನ್ಸ ಮೂಲಕ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೆಕ್ಯೂರಿಟಿ ಗಾರ್ಡ್ ಗೆ ರಕ್ತಸ್ರಾವ ಹಿನ್ನೆಕೆ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಇಬ್ಬರು ಹೆಂಡಂದಿರ ಗಂಡನಾಗಿರುವ ಸೆಕ್ಯೂರಿಟಿ ಗಾರ್ಡ್ ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಯತ್ನ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಬ್ಯಾಂಕ್ ಅಧಿಕಾರಿಗಳು, ಮುದ್ದೇಬಿಹಾಳ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಖರಣ ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights