ಶ್ರವಣಬೆಳಗೊಳದಲ್ಲಿ ತಪ್ಪದ ಚಿರತೆಯ ಓಡಾಟ ಸಿಸಿ ಕ್ಯಾಮೆರಾದಲ್ಲಿ ಸೆರೆ…!

ಹಾಸನದ ಶ್ರವಣಬೆಳಗೊಳದಲ್ಲಿ ತಪ್ಪದ ಚಿರತೆಯ ಓಡಾಟ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ ಚಿರತೆ ಕಾಟ ಅಧಿಕವಾಗಿದ್ದು, ಜನ ಆತಂಕದಲ್ಲಿ ಜೀವನ ನಡೆಸುವಂತಾಗಿದೆ.ರಾತ್ರಿ ಪಟ್ಟಣದ ಜೈನ ಮಠದ ಹಿಂಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆ ಓಡಾಟ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಿರತೆ ಓಡಾಟದಿಂದ ಆತಂಕಗೊಂಡಿರುವ ಗ್ರಾಮಸ್ಥರು, ಕಳೆದ ಕೆಲ ತಿಂಗಳಿನಿಂದಲೂ ಚಿರತೆ ಹಾವಳಿಗೆ ಜನ ಬೇಸತ್ತಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆಹಿಡಿಯುವುದಾಗಿ ಭರವಸೆ ನೀಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights