ಶ್ರೀರಂಗಪಟ್ಟಣದ ಕಾವೇರಿ ಸಂಗಮದಲ್ಲಿ ಮತ್ತೊಂದು ದುರಂತ ! : ನದಿ ನೀರಿನಲ್ಲಿ ಮುಳುಗಿ ಇಬ್ಬರು ಸಾವು

ಮಂಡ್ಯ ಜಿಲ್ಲೆ  ಶ್ರೀರಂಗಪಟ್ಟಣದ ಕಾವೇರಿ ಸಂಗಮದಲ್ಲಿ ಮತ್ತೊಂದು ದುರಂತ ನಡೆದಿದೆ. ನದಿ ನೀರಿನ ರಭಸಕ್ಕೆ ಇಬ್ಬರು ಕೊಚ್ಚಿ ಹೋದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ ಕಾವೇರಿ ಸಂಗಮದಲ್ಲಿ ನಡೆದಿದೆ.

ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿದ್ದ ಮುಸ್ಲಿಂ ಕುಟುಂಬದ ಸಲೀಂ( ೩೩) ಮತ್ತು ಮುನಾನ್ (೩)  ನದಿ ನೀರಿನಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದಾರೆ. ಚಿಕ್ಕ ಮಗು ಮುನಾನ್ ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದು ಕಣ್ನೆದುರಿನಲ್ಲೇ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ.  ಆ ಮಗುವನ್ನು ರಕ್ಷಣೆ ಮಾಡಲು‌ ನೀದಿಗೆ ಧುಮುಕಿದ ಸಂಬಂಧಿಕ ವ್ಯಕ್ತಿ ಸಲೀಂ ಕೂಡ ನೀರು ಪಾಲಾಗಿದ್ದಾನೆ.

ರಕ್ಷಣೆಗೆ ಸ್ಥಳೀಯರು ನೀರಿಗೆ ಜಿಗಿದ್ರು ನೀರಿನ ರಭಸಕ್ಕೆ ಇಬ್ಬರು ಕೊಚ್ಚಿ ಹೋಗಿದ್ದಾರೆ. ಸ್ಥಳದಲ್ಲೇ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೊಚ್ಚಿ ಹೋದ ಇಬ್ಬರ ಶವಗಳಿಗಾಗಿ ಹುಟುಕಾಟ ನಡೆಯುತ್ತಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights