ಸಕ್ಕರೆನಾಡಲ್ಲಿ ಉಲ್ಬಣಿಸಿದ ಕಬ್ಬು ಬೆಳೆಗಾರ ರೈತರ ಸಮಸ್ಯೆ : 2 ವಾರದಲ್ಲಿ ಸಮಸ್ಯೆ ಬಗೆ ಹರಿಸುವ ಸಚಿವರ ಭರವಸೆ
ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರ ರೈತರ ಸಮಸ್ಯೆ ಉಲ್ಬಣಿಸಿದೆ.ಜಿಲ್ಲೆಯಲ್ಲಿ ಎರಡು ಸಕ್ಕರೆ ಕಾರ್ಖಾನೆಗಳು ಸ್ಥಗಿತಗೊಂಡಿದ್ದು,ಜಿಲ್ಲೆಯ ಪಾಂಡವಪುರ, ಶ್ರೀರಂಗಪಟ್ಟಣ ಹಾಗೂ ಮಂಡ್ಯ ಭಾಗದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ರೈತರ ಸಮಸ್ಯೆ ಆಲಿಸದಿದ್ರೆ ನಾಡ ಹಬ್ಬ ದಸರಾಗೆ ಅಡ್ಡಿಪಡಿಸುವ ಬಗ್ಗೆ ಜಿಲ್ಲೆಯ ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರು. ಈ ಹಿನ್ನಲ್ಲೆಯಲ್ಲಿ ಖುದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ಅಶೋಕ್ ಸಿ.ಎಂ. ಆದೇಶದ ಮೇರೆಗೆ ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತರ ಸಭೆ ನಡೆಸಿ ಸಮಸ್ಯೆ ಬಗೆ ಹರಿಸಲು ಮುಂದಾದ್ರು.
ಹೌದು! ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರ ರೈತರ ಸಮಸ್ಯೆ ಉಲ್ಭಣಿಸಿದೆ. ರೈತರ ಸಮಸ್ಯೆ ಉಲ್ಬಣಿಸಿ ರೈತರು ಸರ್ಕಾರಕ್ಕೆಎಚ್ಚರಿಕೆ ನೀಡಿದ್ರು. ಇದ್ರಿಂದ ಎಚ್ಚೆತ್ತ ಸರ್ಕಾರ ಇಂದು ಮಂಡ್ಯದಲ್ಲಿ ರೈತರ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಕಬ್ಬು ಬೆಳೆಗಾರ ರೈತರ ಸಮಸ್ಯೆ ಬಗೆ ಹರಿಸಲು ಮುಂದಾಯ್ತು.ಮಂಡ್ಯದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ರೈತರ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಸಭೆ ನಡೆಸಿ ಜಿಲ್ಲೆಯ ರೈತರ ಸಮಸ್ಯೆ ಎರಡು ವಾರದಲ್ಲಿ ಬಗೆ ಹರಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ್ರು ಭರವಸೆ ನೀಡಿದ್ರು.
ಇನ್ನು ಸುಮಾರು ಒಂದು ತಾಸು ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರೈತರ ಸಮಸ್ಯೆ ಆಲಿಸಿದ್ರು. ಅಲ್ದೆ ಸಕ್ಕರೆ ಕಾರ್ಖಾನೆಗಳು ಕೂಡ ರೈತರ ಸಮಸ್ಯೆಗೆ ಸ್ಪಂದಿಸುವಂತೆ ಕರೆ ನೀಡಿ, ಜಿಲ್ಲೆಯಲ್ಲಿ ಸ್ಥಗಿತವಾಗಿರೋ ಎರಡು ಕಾರ್ಖಾನೆಗಳನ್ನು ಮುಂದಿನವರ್ಷದಿಂದ ಆರಂಭಿಸುವ ಬಗ್ಗೆ ಭರವಸೆ ನೀಡಿ ಸದ್ಯ ಬೆಳೆದು ನಿಂತಿರುವ ಕಬ್ಬು ಬೆಳೆಯನ್ನು ರಾಜ್ಯದ ಮತ್ತು ಹೊರ ರಾಜ್ಯದ ಕಾರ್ಖಾನೆಗೆ ಸಾಗಿಸಿ ಅರೆಸುವ ಕ್ರಮ ಕೈಗೊಳ್ಳಲಾವುದು, ಮತ್ತು ರೈತರಿಗೆ ಸಾಗಾಣಿಕೆ ವೆಚ್ಚವನ್ನು ಸರ್ಕಾರದಿಂದ ಕೊಡಿಸುವ ಭರವಸೆ ನೀಡಿದ್ರು. ಇದೇ ಸಂಧರ್ಭದಲ್ಲಿ ರೈತರಿಂದ ಕೆ.ಆರ್.ಎಸ್ ಡ್ಯಾಂ ಸುತ್ತಮುತ್ತಾ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಆರೋಪ ಬಂದಿರುವ ಬಗ್ಗೆ ತಕ್ಷಣವೇ ಕ್ರಮ ಕೈಗೊಂಡು ಅಕ್ರಮ ಗಣಿಗಾರಿಕೆಯನ್ನು ಸಂಪೂರ್ಣ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಡಿಸಿ ಮತ್ತು ಎಸ್ಪಿಗೆ ಸೂಚನೆ ನೀಡಿದ್ರು.
ಒಟ್ಟಾರೆ ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರ ರೈತರ ಸಮಸ್ಯೆಗೆ ಕಡೆಗು ಸರ್ಕಾರ ಮುಂದಾಗಿದ್ದು, ಸಮಸ್ಯೆ ಬಗೆ ಹರಿಸುವುದಾಗಿ ರೈತರಿಗೆ ಭರವಸೆ ನೀಡಿದೆ. ಆದ್ರೆ ಕೊಟ್ಟಿರುವ ಈ ಭರವಸೆ ಎಷ್ಟರ ಮಟ್ಟಿಗೆ ಬಗೆ ಹರಿಸಿ ಈಡೇರಿಸುತ್ತದೆ ಅನ್ನೋದ್ನ ಕಾದು ನೋಡಬೇಕಿದೆ.