ಸಾಂಸ್ಕೃತಿಕ ನಗರಿ ಮೈಸೂರಿನ ದೇಗುಲಗಳಲ್ಲಿ ಗಣೇಶ ಹಬ್ಬದ ಸಂಭ್ರಮ….

ಸಾಂಸ್ಕೃತಿಕ ನಗರಿ ಮೈಸೂರಿನ ದೇಗುಲಗಳಲ್ಲಿ ಗಣೇಶ ಹಬ್ಬದ ಸಂಭ್ರಮ. ಇಂದು ಬೆಳಗಿನ ಜಾವದಿಂದಲೇ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಅಲಂಕೃತ ಮಂಟಪಗಳಲ್ಲಿ ಪ್ರತಿಷ್ಠಾಪಿಸಿರುವ ಗೌರಿ ಗಣೇಶ ಮೂರ್ತಿಗಳಿಗೆ ಆಸ್ತಿಕರಿಂದ ಪೂಜೆ ಸಲ್ಲಿಸಲಾಯ್ತು.

ಮೈಸೂರಿನ ಅಗ್ರಹಾರದಲ್ಲಿರುವ ನೂರೊಂದು ಗಣಪತಿ, ನವಗ್ರಹ ಗಣಪತಿ, ಅರಮನೆಯ ಕೋಟೆ ಗಣಪತಿ, ಸಯ್ಯಾಜಿರಾವ್ ರಸ್ತೆಯಲ್ಲಿರುವ ಪಂಚಮುಖಿ ಗಣಪತಿ ದೇಗುಲಗಳು ಸೇರಿದಂತೆ ನಗರದ ಪ್ರಮುಖ ಗಣಪತಿ ದೇಗುಲಗಳಲ್ಲಿ ಹೆಚ್ಚಿನ ಜನಸಂದಣಿ ಇತ್ತು.

ವಿಘ್ನನಿವಾರಕನ ದರ್ಶನ ಪಡೆದು ಭಕ್ತರು ಪುನೀತರಾದರು. ಮೈಸೂರಿನ ಅಗ್ರಹಾರದ 101ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯ್ತು. 101ಗಣಪತಿ ಒಂದೇ ಕಡೆ ನೋಡಲು  ಭಕ್ತರ ದಂಡು ಆಗಮಿಸಿದೆ. ಹಬ್ಬದ ಹಿನ್ನಲೆ 28 ವಿವಿಧ ಬಗೆಯ ದ್ರವ್ಯಗಳಿಂದ ಅಭಿಷೇಕ ಮಾಡಲಾಗುತ್ತಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights