ಸಿದ್ದರಾಮಯ್ಯ ಕಾಂಗ್ರೆಸ್ ನಿಂದ ಹೊರಗೆ ಬಂದರೂ ಆಶ್ಚರ್ಯ ಇಲ್ಲ – ಹೊಸ ಬಾಂಬ್ ಸಿಡಿಸಿದ ಎಂಪಿ ರೇಣುಕಾಚಾರ್ಯ

ಕಾಡಿ ಬೇಡಿ ರಾಜ್ಯಾಧ್ಯಕ್ಷ ಹಾಗೂ ಪ್ರತಿ ಪಕ್ಷದ ನಾಯಕ ಸ್ಥಾನ ಪಡೆದ ಸಿದ್ದರಾಮಯ್ಯ ಕಾಂಗ್ರೆಸ್ ನಿಂದ ಹೊರಗೆ ಬಂದರೂ ಆಶ್ಚರ್ಯ ಇಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಗೋಲಿ ಆಡುವವರು ಅಂತ ಹೇಳಿಕೆ ಸರಿಯಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ತೊರೆದ್ರು, ತೊರೆಯಬಹುದು.

ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ ನಿಮ್ಮಂತೆ ಮತಾಂಧ ಟಿಪ್ಪು ಜಯಂತಿ ನಾವು ಮಾಡಲ್ಲ. ಸಾವರ್ಕರ್ ಗೆ ಭಾರತ ರತ್ನ ಕೊಟ್ಟರೆ ತಪ್ಪಿಲ್ಲ. ರಾಜ್ಯಪಾಲರು ರೈತರ ಮನವಿಗೆ ಸ್ಪಂದಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ದಾವಣಗೆರೆಯ ಹೊನ್ನಾಳಿ ತಾಲೂಕಿನ ಹಿರೆಗೋಣಿಗೆರೆ ಗ್ರಾಮದಲ್ಲಿ ರೇಣುಕಾಚಾರ್ಯ ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights