ಸುಮಲತಾ ಹೆಸರೇಳಿಕೊಂಡು ರಾಜಕೀಯ ಮಾಡುವ ದುಸ್ಥಿತಿ ಬಂದಿಲ್ಲ : ಶಿವರಾಮೇಗೌಡ ವ್ಯಂಗ್ಯ

ಲೋಕಸಭಾ ಚುನಾವಣೆಗೆ ಮುನ್ನಾ ಸುಮಲತ ಮಾಯಾಂಗನೆ ಎಂದು ಕಾಲೆಳೆದಿದ್ದ ಶಿವರಾಮೇಗೌಡ ಮತ್ತೆ ಹಾಲಿ ಸಂಸದೆಯನ್ನು ಟಾರ್ಗೆಟ್ ಮಾಡಿದ್ದಾರೆ. ನೆನ್ನೆ ನಾಗಮಂಗಲದ ಕಾಂಗ್ರೆಸ್ ಕಚೇರಿಗೆ ಬಂದ ಸುಮಲತಾ ವಿರುದ್ದ ವ್ಯಂಗ್ಯವಾಡಿದ್ದಾರೆ.

ಸುಮಲತಾ ಹೆಸರೇಳಿಕೊಂಡು ರಾಜಕೀಯ ಮಾಡುವ ದುಸ್ಥಿತಿ ಬಂದಿಲ್ಲ ಎಂದು ಮಂಡ್ಯದ ನಾಗಮಂಗಲದಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ತಿರುಗೇಟು ಕೊಟ್ಟಿದ್ದಾರೆ.

ಸುಮಲತಾ ಅವ್ರು ರಾಜಕೀಯಕ್ಕೆ ಬರುವುದಕ್ಕೂ ಮುಂಚೆ ಫಸ್ಟ್ಲಾಸ್ ಆಗಿ ರಾಜಕೀಯ ಮಾಡಿದ್ದೇವೆ. ರೈತರು ಸಮಸ್ಯೆ ಹೇಳಿಕೊಂಡಾಗ ಜನರ ಮುಂದೆ ವಿಚಾರ ಇಟ್ಟಿದ್ದೇನೆ. ಸುಮಲತಾ ಅವ್ರ ವೈಯಕ್ತಿಕ ವಿಚಾರ ಹೇಳಿಲ್ಲ ಕ್ರಮ ತೆಗೆದುಕೊಳ್ಳಲಿ ಎಂದಿದ್ದೇನೆ. ಅದಕ್ಕೆ ಭಾಷಣ ಮಾಡಿ ಹೋಗ್ತಾರೆ ಎಂದಿದ್ದಾರೆ. ಸುಮಲತಾ ಅವ್ರು ಭಾಷಣ ಮಾಡದೆ ಗುದ್ದಲಿ ತೆಗೆದುಕೊಂಡು ಹಗೆಯುತ್ತಿದ್ದಾರಾ?

ತಮ್ಮ ಹೆಸರೇಳದಿದ್ರೆ ಕೆಲವರಿಗೆ ಮಾರ್ಕೆಟ್ ಕಡಿಮೆಯಾಗುತ್ತದೆ ಎಂಬ ಸುಮಲತಾ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ. ಮೈಷುಗರ್ ಕಾರ್ಖಾನೆಗೆ ಹಣ ನೀಡಿದ್ರೆ ಅಧ್ಯಕ್ಷರು ಜೇಬು ತುಂಬುತ್ತೆ. ಹಳೇ ಕಾರ್ಖಾನೆಗೆ ಹಣ ನೀಡುವ ಬದಲು, ಹೊಸ ಕಾರ್ಖಾನೆ ಮಾಡುವಂತೆ ಒತ್ತಾಯಿಸಿದ್ದೋ. ಹೊಸ ಕಾರ್ಖಾನೆಗೆ ಕುಮಾರಸ್ವಾಮಿ ಸಂಕಲ್ಪದಂತೆ ಯಡಿಯೂರಪ್ಪಜಿ ತೀರ್ಮಾನ ತೆಗೆದುಕೊಳ್ಳಬೇಕು.

ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಹಿಂದಿನ ಸರ್ಕಾರವೇ ಕಾರಣ ಎಂಬ ಸುಮಲತಾ ಆರೋಪ ವಿಚಾರಕ್ಕೆ, ನಮ್ಮಿಂದ ತಪ್ಪಾಗಿದೆ ನೀವು ಅಧಿಕಾರದಲ್ಲಿದ್ದೀರಿ ಸಮಸ್ಯೆ ಬಗೆಹರಿಸಿ. ಅದನ್ನು ಬಿಟ್ಟು ಕೆಸರೆರಚಾಡಿಕೊಂಡ್ರೆ ಪ್ರಯೋಜನವಿಲ್ಲ. ಸಂಸದರೂ ತಮ್ಮ ಕೆಲಸ ಮಾಡಬೇಕು, ಶಾಸಕರೂ ತಮ್ಮ ಕೆಲಸ ಮಾಡಬೇಕು. ಶಾಸಕರು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು ನಮ್ಮ ಶಾಸಕರು ಹಾಗೆ ಮಾಡುವುದಿಲ್ಲ. ಕೆ.ಆರ್.ಪೇಟೆಗೆ ಹೋದ್ರೆ ಬಿಜೆಪಿ ಜೊತೆ, ನಾಗಮಂಗಲಕ್ಕೆ ಬಂದ್ರೆ ಕಾಂಗ್ರೆಸ್ ಜೊತೆ ಹೋಗ್ತಾರೆ. ತಮ್ಮದು ಯಾವ ಪಾರ್ಟಿ ಎಂದು ಮೊದ್ಲು‌ ತೀರ್ಮಾನ ಮಾಡಲಿ. ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಅವ್ರು ಸ್ವಾಭಿಮಾನದ ಹೆಸರಿನಲ್ಲಿ ಹೋರಾಡಿದ್ರು. ಈಗ ಸುಮಲತಾ ಅವ್ರು ಯಾರಿಗೆ ಎಷ್ಟೆಷ್ಟು ಪಾಲು ಕೊಡ್ತಾರೆ ನೋಡಬೇಕು ಎಂದು ಕಿಡಿ ಕಾರಿದ್ದಾರೆ.

ಚುನಾವಣೆಯಲ್ಲಿ ಜೆಡಿಎಸ್ ನವರು ನನ್ನ ಪರ ಕೆಲಸ ಮಾಡಿದ್ದಾರೆ ಕರೆದ್ರೆ ಜೆಡಿಎಸ್ ಕಚೇರಿಗೂ ಹೋಗುತ್ತೇನೆ ಎಂಬ ಸುಮಲತಾ ಹೇಳಿಕೆ ವಿಚಾರಕ್ಕೆ ಶಿವರಾಮೇಗೌಡರು ಮಾತನಾಡಿ, ಯಾರಾದ್ರು ವೋಟ್ ಹಾಕಿದ್ರೆ ಅವ್ರ ಮನೆಯಲ್ಲಿ ಹೋಗಿ ಊಟ ಮಾಡ್ಲಿ. ನಾವು ಜೆಡಿಎಸ್ ಕಚೇರಿಗೆ ಕರೆಯುವುದಿಲ್ಲ.ಅವ್ರನ್ನ ಕರೆದುಕೊಳ್ಳಲು ಕಾಯ್ದು ಕುಳಿತಿರುವವರು ಕಾಂಗ್ರೆಸ್, ಬಿಜೆಪಿಯವರು ಎಂದು ತಿರುಗೇಟು ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights