15 ಕ್ಷೇತ್ರಗಳ ಉಪಚುನಾವಣೆ : ಇನ್ನೇರಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿ‌ಗಳ ಪಟ್ಟಿ ಫೈನಲ್

15 ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಇನ್ನೇರಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿ‌ಗಳ ಪಟ್ಟಿ ಫೈನಲ್ ಆಗಲಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರ‌ಸ್ವಾಮಿ ಹೇಳಿದ್ದಾರೆ.

30ರೋಳಗೆ ನಾಮಪತ್ರ ಸಲ್ಲಿಸಲೇಬೇಕಲ್ಲವೇ. ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಸ್ಪಷ್ಟನೆ ನೀಡಿದ್ದಾರೆ. ಚುನಾವಣೆ ನಡೆದೇ ನಡೆಯುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ. 15 ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನಗಳನ್ನ ಜೆಡಿಎಸ್ ಗೆಲ್ಲಲಿದೆ. ಈ ಚುನಾವಣೆ ಎಲ್ಲ ಪಕ್ಷಗಳಿಗೂ ಅಗ್ನಿ ಪರೀಕ್ಷೆ ಇದ್ದಂತೆ. ಗೆಲವು ಸಾಧಿಸಲು ಜೆಡಿಎಸ್ ತನ್ನದೆ ಅದ ರಾಜಕೀಯ ತಂತ್ರಗಾರಿಗೆ ಮಾಡಲಿದೆ.

ಎಲ್ಲ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರಿಗೆ ಅವಕಾಶ ನೀಡಲಾಗುತ್ತದೆ. ಹುಣಸೂರು, ಕೆ.ಆರ್.ಪೇಟೆಯಲ್ಲಿ ಸ್ಥಳಿಯ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು. ಉಪಚುನಾವಣೆ ಫಲಿತಾಂಶದ ನಂತರ ಹೊಸ ನಾಟಕ ಶುರುವಾಗುತ್ತೆ.
ಮೈತ್ರಿ ಬಗ್ಗೆ ಈಗ ಮಾತನಾಡೋದು ಬೇಡ ಬಿಡಿ ಎಂದು ಉಪಚುನಾವಣೆಯ ಬಗ್ಗೆ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights