ಪ್ರೀತಿ ನಿರಾಕರಿಸಿದ ಪ್ರೇಯಸಿಗೆ ಚಾಕುವಿನಿಂದ ಇರಿದ ಭಗ್ನಪ್ರೇಮಿ…!
ಪ್ರೀತಿ ನಿರಾಕರಿಸಿದ ಪ್ರೇಯಸಿಗೆ ಭಗ್ನಪ್ರೇಮಿಯೊಬ್ಬ ಚಾಕುವಿನಿಂದ ಇರಿದ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.
ಹೊಳೆನರಸೀಪುರದ ಸರ್ಕಾರಿ ಮಹಿಳಾ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಮೇಘನಾಗೆ ಚಾಕುವಿನಿಂದ ಇರಿಯಲಾಗಿದೆ. ಪಡುವಲಹಿಪ್ಪೆ ಪ್ರಥಮ ದರ್ಜೆ ಕಾಲೇಜು ಬಿಎ ವಿದ್ಯಾರ್ಥಿ ಮಣಿಕಂಠನಿಂದ ಕೃತ್ಯ ಎಸಗಲಾಗಿದೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಆರೋಪಿ ಮಣಿಕಂಠ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.