ರಮೇಶ್ ಕುಮಾರ್ ರಾಜಕೀಯ ನಿವೃತ್ತಿ ಎಂಬ ವದಂತಿ; ಸ್ಪಷ್ಟನೆ ನೀಡಿದ ಮಾಜಿ ಸ್ಪೀಕರ್!
ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಿಸಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸುವುದಿಲ್ಲ ಎಂದು ವದಂತಿ ಹರಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ರಮೇಶ್ ಕುಮಾರ್, ತಮ್ಮ ರಾಜಕೀಯ ನಿವೃತ್ತಿ ಬಗ್ಗೆ ಹರಡಿರುವ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಮೇಶ್ ಕುಮಾರ್, ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ ಎಂಬುದು ಕೇವಲ ವದಂತಿ. ರಾಜಕೀಯ ನಿವೃತ್ತಿ ಬಗ್ಗೆ ನಾನೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ನನ್ನನ್ನ ಈ ಮಟ್ಟಕ್ಕೆ ಬೆಳೆಸಿದ ಜನರು ನಿರ್ಧಾರ ತೆಗೆದುಕೊಳ್ಳಬೇಕಿದೆ. ಏಕೆಂದರೇ ನಾನು ಜನರ ಪ್ರೀತಿಯ ಬಂಧನದಲ್ಲಿರುವೆ ಎಂದು ತಿಳಿಸಿದ್ದಾರೆ.
ನಿನ್ನೆ ಕಾಂಗ್ರೆಸ್ ಕಾರ್ಯಕರ್ತರ ಸಭೆಯೊಂದರಲ್ಲಿ ಸಕ್ರಿಯ ರಾಜಕಾರಣಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿ ಹರಡಿತ್ತು.
ಇದನ್ನೂ ಓದಿ: BJP ಸರ್ಕಾರದ ಭೂಸುಧಾರಣಾ ಮಸೂದೆಗೆ JDS ಬೆಂಬಲ; ಪರಿಷತ್ನಲ್ಲಿ ಅಂಗೀಕಾರ!