ರೂಪಾ ಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಪತಿ ವಿಚಾರಣೆಯಲ್ಲಿ ಬಯಲಾಯ್ತು ಭಯಾನಕ ಸತ್ಯ!
ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ರೂಪ ಪ್ರಕರಣಕ್ಕೆ ಭಾರೀ ಟ್ವಿಸ್ಟ್ ಸಿಕ್ಕಿದ್ದು ಪತಿಯ ವಿಚಾರಣೆ ವೇಳೆ ರೋಚಕ ಸತ್ಯ ಬಯಲಾಗಿದೆ.
ಪತ್ನಿ ರೂಪಾಳ ಶೀಲ ಶಂಕಿಸಿದ ಫೈನಾನ್ಸ್ ಮತ್ತು ರಿಯಲ್ ಎಸ್ಟೇಟ್ ಬ್ರೋಕರ್ ಕಾಂತರಾಜ್ ಸೆ.22ರಂದು ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದನು. ಎಪಿ ನಗರ ಪೊಲೀಸರು ಆರೋಪಿ ಕಾಂತರಾಜ್ ನನ್ನು ಬಂಧಿಸಿದ್ದರು. ಇದೀಗ ವಿಚಾರಣೆ ವೇಳೆ ಪತ್ನಿಯನ್ನು ಸಿನಿಮಾ ಸ್ಟೈಲ್ ನಲ್ಲಿ ಹತ್ಯೆ ಮಾಡಲು ಸಂಚು ರೂಪಿಸಿದ್ದಾಗಿ ಹೇಳಿದ್ದಾನೆ.
ಪತ್ನಿ ರೂಪಾಳನ್ನು ಪ್ರೀತಿಸಿ ವಿವಾಹವಾಗಿದ್ದ ಕಾಂತರಾಜ್ ಅನ್ನಪೂರ್ಣೇಶ್ವರಿ ನಗರದಲ್ಲಿ ವಾಸವಾಗಿದ್ದನು. ಆದರೆ ಕಾಂತರಾಜುಗೆ ಪತ್ನಿ ರೂಪಾಳ ಶೀಲದ ಮೇಲೆ ಶಂಕೆ ವ್ಯಕ್ತವಾಗಿತ್ತು. ಈ ಸಂಶಯದಿಂದ ಪತ್ನಿಯನ್ನು ಹತ್ಯೆ ಮಾಡಲು ಸಿನಿಮಿಯ ರೀತಿಯಲ್ಲಿ ಸಂಚು ರೂಪಿಸಿದ್ದಾನೆ.
ಪ್ರವಾಸಕ್ಕೆಂದು ಕರೆದೊಯ್ದು ಎತ್ತರದ ಗುಡ್ಡದ ಮೇಲಿನಿಂದ ತಳ್ಳಲು ಮೂರು ಬಾರಿ ಯತ್ನಿಸಿದ್ದಾನೆ ಆದರೆ ಅದು ಸಾಧ್ಯವಾಗಿಲ್ಲ. ಇನ್ನೂ ಕಾರಿನಿಂದ ಗುದ್ದಿ ಸಾಯಿಸಲು ಪ್ರಯತ್ನಿಸಿದ್ದಾನೆ ಅದೂ ಕಕೂಡ ಸಾಧ್ಯವಾಗಿಲ್ಲ ಕೊನೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮನೆ ಬೀಗ ಹಾಕಿ ಎಸ್ಕೇಪ್ ಆಗಿದ್ದ ಕಾಂತರಾಜುವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಿಚಾರಣೆ ವೇಳೆ ಕಾಂತರಾಜು ಸತ್ಯ ಒಪ್ಪಿಕೊಂಡಿದ್ದಾನೆ.