ಅಕ್ರಮ ಹಣ ಸಾಗಿಸುತ್ತಿದ್ದವರು ಪೋಲಿಸರ ಬಲೆಗೆ
ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ ೨೩ ಲಕ್ಷ ರೂಪಾಯಿಯನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಈ ಒಂದು ಘಟನೆ ಹುಬ್ಬಳ್ಳಿ ಜಿಲ್ಲೆಯ ಕುಂದಗೋಳ ತಾಲೂಕಿನ ಬೇಟದೂರ ಬಳಿ ನಡೆದಿದೆ. ಕಳೆದ ರಾತ್ರಿ ಹುಬ್ಬಳ್ಳಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ಒಯ್ಯುವಾಗ ಈ ಘಟನೆ ನಡೆದಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.
ಬಂಧಿತರಿಂದ 2೦೦೦ ಮುಖಬೆಲೆಯ 2೦ ಲಕ್ಷ ಹಾಗೂ 1೦೦ ರೂಪಾಯಿಯ 3 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಮೀರರಾಮ್, ಅರವಿಂದ ಹಾಗೂ ಪ್ರೇಮಸಿಂಗ್ ನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Comments are closed.