ಅಪ್ಪು ಪಟ್ಟಣಶೆಟ್ಟಿಯನ್ನು ಬಿಜೆಪಿಯಿಂದ ಉಚ್ಠಾಟಿಸಿ : ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಶುರವಾಯ್ತು ಶೀತಲ ಸಮರ
ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರನ್ನು ಬಿಜೆಪಿಯಿಂದ ಉಚ್ಠಾಟಿಸಿ ಎಂದು ಯತ್ನಾಳ ಬೆಂಬಲಿಗ ರಾಘವ ಅಣ್ಣಿಗೇರಿ ಆಗ್ರಹಿಸಿದ್ದಾರೆ. ಇದರಿಂದ ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಶುರವಾಯ್ತು ಶೀತಲ ಸಮರ ಶುರುವಾದಂತಾಗಿದೆ.
ಬಿಜೆಪಿ ಮುಖಂಡ ಮತ್ತು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಬೇಕು ಎಂದು ಯತ್ನಾಳ ಬೆಂಬಲಿಗ ಮತ್ತು ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷ ರಾಘವ ಅಣ್ಣಿಗೇರಿ ಆಗ್ರಹಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವ ಅಣ್ಣಿಗೇರಿ ಮತ್ತು ನಾನಾ ಸಂಘಟನೆಗಳ ಕಾರ್ಯಕರ್ತರು ಹಾಗೂ ಯತ್ನಾಳ ಬೆಂಬಲಿಗರು, ಯತ್ನಾಳ ವಿರುದ್ಧ ಮತ್ತು ವಿಜಯಪುರ ನಗರದ ರಸ್ತೆಗಳ ದುರಸ್ಥಿ ಹಾಗೂ ಶ್ರೀಶೈಲ ಜಗದ್ಗುರುಗಳು ಯತ್ನಾಳ ಪರ ಬರೆದಿರುವ ಪತ್ರದ ಬಗ್ಗೆ ಅಪ್ಪು ಪಟ್ಟಣಶೆಟ್ಟಿ ಮಾತನಾಡುವ ಮೂಲಕ ಬಿಜೆಪಿ ಪಕ್ಷಕ್ಕೆ ಮತ್ತು ಸರಕಾರಕ್ಕೆ ಮುಜುಗರ ಉಂಟು ಮಾಡಿದ್ದಾರೆ. ಈಗ ಪ್ರವಾಹ ಪರಿಹಾರ ಕಾರ್ಯಗಳು ಒಂದೆಡೆಯಾದರೆ, ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ನೀಡಿದ ಹೇಳಿಕೆಯಿಂದ ಬಿಜೆಪಿ ವರ್ಚಸ್ಸಿಗೆ ಕುಂದುಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಅವರು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಶ್ರೀಶೈಲ ಜಗದ್ಗುರುಗಳ ವಿರುದ್ಧ ಅಪ್ಪು ಪಟ್ಟಣಶೆಟ್ಟಿ ಮಾತನಾಡಿರುವುದು ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಹಿನ್ನೆಲೆಯಲ್ಲಿ ಅಪ್ಪು ಪಟ್ಟಣಶೆಟ್ಟಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ರಾಘವ ಅಣ್ಣಿಗೇರಿ ಆಗ್ರಹಿಸಿದರು.