ಜಾತ್ರೆಗಿಲ್ಲ ಕೊರೊನಾ ಭಯ : ಉತ್ಸವದಲ್ಲಿ ಭಾಗವಹಿಸಿದ ಸಾವಿರಾರು ಜನ..!

ಗಾಳಿ ವೇಗದಲ್ಲಿ ವಿಶ್ವದೆಲ್ಲಡೆ ಹಬ್ಬುತ್ತಿರುವ ಕೊರೊನಾ ವೈರಸ್ ಗೆ ಬ್ರೇಕ್ ಹಾಕೋದಕ್ಕೆ ರಾಜ್ಯ ಸರ್ಕಾರ ರಾಜ್ಯದಲ್ಲಿಯೇ ವಾರಗಳ ಕಾಲ ಜಾತ್ರೆ, ಉತ್ಸವ ಮುಂತಾದವುಗಳನ್ನು ಮುಂದೂಡುವಂತೆ ಹೇಳಿದೆ. ಆದ್ರೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಮಲೆತಿರಿಕೆ ಬೆಟ್ಟದಲ್ಲಿ ಸಾವಿರಾರು ಜನರು ಒಂದೆಡೆ ಸೇರಿ ಜಾತ್ರೆ ಆಚರಿಸುತ್ತಿದ್ದಾರೆ.

ಹೌದು… ಬೆಟ್ಟದ ಮೇಲಿರುವ ಶಿವನ ದೇವಾಲಯದಲ್ಲಿ ನಡೆಯುವ ಈ ಜಾತ್ರೆಗೆ ಸುತ್ತಮುತ್ತಲ 12 ಹಳ್ಳಿಗಳಿಂದ ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಒಂದೆಡೆ ಸರ್ಕಾರ ಕೊರೊನಾ ವೈರಸ್ ಅನ್ನು ನಿಯಂತ್ರಿಸುವುದಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೆ.

ಇಲ್ಲಿ ಮಾತ್ರ ಸರ್ಕಾರದ ಈ ನಿಯಮವನ್ನು ಗಾಳಿಗೆ ತೂರಿ ಜಾತ್ರೆ ನಡೆಸಲಾಗುತ್ತಿದೆ. ಪ್ರತೀ ವರ್ಷ ಮಾರ್ಚ್ 14 ರಂದು ಈ ಜಾತ್ರೆ ನಡೆಯುತ್ತಾ ಬಂದಿದ್ದು, ಅದೇ ರೀತಿ ಈ ಬಾರಿಯೂ ಜಾತ್ರೆ ನಡೆಯುತ್ತಿದೆ. ಇದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆಯೋ ಇಲ್ಲವೋ ಗೊತ್ತಿಲ್ಲ. ಆದ್ರೆ ಜನರು ಮಾತ್ರ ನಾವು ಹದಿನಾಲ್ಕು ದಿನಗಳಿಂದ ಅತ್ಯಂತ ಶುದ್ಧದಿಂದ ಇದ್ದು, 14 ನೇ ದಿನದಂದು ಜಾತ್ರೆ ಆಚರಿಸುತ್ತೇವೆ. ಅದಕ್ಕಿಂತ ಮುಖ್ಯವಾಗಿ ಇಲ್ಲಿಗೆ ಯಾರೂ ಹೊರರಾಜ್ಯ ಅಥವಾ ಹೊರ ದೇಶದವರು ಬರುವುದಿಲ್ಲ. ಆದ್ದರಿಂದ ನಮಗೆ ಕೊರೊನಾ ಹರಡುತ್ತದೆ ಎಂಬ ಆತಂಕವಿಲ್ಲ ಎನ್ನುತ್ತಿದ್ದಾರೆ ಭಕ್ತರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights