ಅರ್ನಬ್‌ಗೆ ಜಾಮೀನು: ಸುಪ್ರೀಂ ಆದೇಶ ಟೀಕಿಸಿ ಟ್ವೀಟ್ ಮಾಡಿದ ಕುನಾಲ್ ಕಮ್ರಾ ವಿರುದ್ಧ ದೂರು!

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದ ಸ್ಟ್ಯಾಂಡ್ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ದೂರು ದಾಖಲಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಒಪ್ಪಿಗೆ ನೀಡಿದ್ದಾರೆ.

ಕುನಾಲ್ ಕಮ್ರಾ ಸುಪ್ರೀಂ ಕೋರ್ಟ್ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಉಲ್ಲೇಖಿಸಿ ನಾಲ್ಕು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಮೂಲಕ ಕಮ್ರಾ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ವಕೀಲರಿಬ್ಬರು ಪ್ರಕರಣ ದಾಖಲಿಸಲು ಅನುಮತಿ ಕೋರಿ ಅಟಾರ್ನಿ ಜನರಲ್ ಗೆ ಪತ್ರ ಬರೆದಿದ್ದರು.

ಸುಪ್ರೀಂ ಕೋರ್ಟ್ ನಲ್ಲಿ ಅರ್ನಬ್ ರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿರುವಾಗಲೇ ಕುನಾಲ್ ಟ್ವೀಟ್ ಮಾಡಿದ್ದರು. ಅಲ್ಲದೆ ಆದೇಶದ ನಂತರವೂ ಟ್ವೀಟ್ ಮಾಡಿದ್ದು ಇದು ಜನರ ಮನಸ್ಸನ್ನು ಪೂರ್ವಾಗ್ರಹಪೀಡಿತಗೊಳಿಸುತ್ತವೆ ಎಂದು ವಕೀಲರಾದ ರಿಜ್ವಾನ್ ಸಿದ್ದಿಕಿ ದೂರಿನಲ್ಲಿ ತಿಳಿಸಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights