ಕೋವಿಡ್ ನಿಯಮ ಅನುಸರಿಸಲು ಹೇಳಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ : 12 ಜನ ಅರೆಸ್ಟ್!

ಕೋವಿಡ್ ನಿಯಮಗಳನ್ನು ಅನುಸರಿಸಲು ಕೇಳಿದ್ದಕ್ಕೆ ಗ್ರಾಮಸ್ಥರು ಒಡಿಶಾದ ಮಯೂರ್ಭಂಜ್ನಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದು 12 ಜನರನ್ನು ಬಂಧಿಸಲಾಗಿದೆ.

ಒಡಿಶಾದ ಮಯೂರ್ಭಂಜ್ ಜಿಲ್ಲೆಯ ದೇಬನ್ಬಹಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶನಿವಾರ ಸಂಜೆ ದೇಬನ್‌ಬಹಲಿ ಗ್ರಾಮದಲ್ಲಿ ನಡೆದ ‘ಚೈತಿ ಪರ್ಬಾ’ ಸಂಭ್ರಮಾಚರಣೆಯಲ್ಲಿ ಸಾವಿರಾರು ಜನರು ಸೇರುವ ಬಗ್ಗೆ  ಮಾಹಿತಿ ಪಡೆದ ಪೊಲೀಸರು ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೆ ತರಲು ಗ್ರಾಮಕ್ಕೆ ಬಂದಿದ್ದರು.

ಆದರೆ ಸಲಹೆಯನ್ನು ಅನುಸರಿಸುವ ಬದಲು ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ಸಿಬ್ಬಂದಿಯ ಲಾಠಿ (ಕೋಲು) ಯಿಂದ ಹಲ್ಲೆ ಮಾಡಿ, ಕಲ್ಲು ತೂರಿ ಓಡಿಸಿದ್ದಾರೆ. ದಾಳಿಯಲ್ಲಿ ಕನಿಷ್ಠ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಗ್ರಾಮಸ್ಥರು ಪೊಲೀಸ್ ವಾಹನವನ್ನು ಧ್ವಂಸ ಮಾಡಿದ್ದಾರೆ.

ಪೊಲೀಸರ ಮೇಲಿನ ದಾಳಿಗೆ ಸಂಬಂಧಿಸಿದಂತೆ 12 ಗ್ರಾಮಸ್ಥರನ್ನು ಬಂಧಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights