ಅಧಿಕಾರಿಗಳು ನಮ್ಮ ಚಪ್ಪಲಿ ಎತ್ತಿಕೊಳ್ಳಲು ಮಾತ್ರ ಇರುವುದು: ಬಿಜೆಪಿ ನಾಯಕಿ ವಿವಾದಾತ್ಮಕ ಹೇಳಿಕೆ

ಅಧಿಕಾರಿಗಳು ‘ನಮ್ಮ ಚಪ್ಪಲಿ ಎತ್ತಿಕೊಳ್ಳಲು ಮಾತ್ರ’ ಇರುವುದು ಹಾಗೂ ಅವರಿಗೆ ಯಾವುದೇ ನಿಲುವು ಇಲ್ಲ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕಿ ಉಮಾಭಾರತಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅಧಿಕಾರಿಗಳಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಉಮಾಭಾರತಿ ಅವರು ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ವಿಡಿಯೋ ಉಮಾ ಭಾರತಿ, “ಅಧಿಕಾರಶಾಹಿಗಳು ರಾಜಕಾರಣಿಗಳನ್ನು ನಿಯಂತ್ರಿಸುತ್ತಾರೆ ಎಂದು ನೀವು ಭಾವಿಸುತ್ತೀರಾ? ಇಲ್ಲ. ಮೊದಲು ಖಾಸಗಿಯಾಗಿ ಚರ್ಚೆಗಳು ನಡೆಯುತ್ತವೆ ಹಾಗೂ ನಂತರ ಅಧಿಕಾರಶಾಹಿ ಒಂದು ಕಡತವನ್ನು ತಯಾರಿಸಿ ಅದನ್ನು ಪಡೆಯುತ್ತದೆ. 11 ವರ್ಷಗಳ ಕಾಲ ನಾನು ಕೇಂದ್ರ ಸಚಿವೆ ಹಾಗೂ ಮುಖ್ಯಮಂತ್ರಿಯಾಗಿದ್ದೇನೆ. ಅಧಿಕಾರಶಾಹಿಗಳು ರಾಜಕಾರಣಿಗಳನ್ನು ನಿಯಂತ್ರಿಸುವುದು ಎಲ್ಲಾ ಅಸಂಬದ್ಧವಾಗಿದೆ. ಅವರ ನಿಲುವು ಏನು? ನಾವು ಅವರಿಗೆ ಸಂಬಳ ನೀಡುತ್ತಿದ್ದೇವೆ, ನಾವು ಅವರಿಗೆ ಪೋಸ್ಟಿಂಗ್ ನೀಡುತ್ತಿದ್ದೇವೆ, ನಾವು ಅವರಿಗೆ ಬಡ್ತಿ ನೀಡುತ್ತೇವೆ ಹಾಗೂ ಕೆಳಗಿಳಿಸುತ್ತೇವೆ. ಅವರು ಏನು ಮಾಡಬಹುದು? ಸತ್ಯವೆಂದರೆ ನಾವು ಅವರನ್ನು ನಮ್ಮ ರಾಜಕೀಯಕ್ಕೆ ಬಳಸುತ್ತೇವೆ” ಎಂದು ಹೇಳಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ಉಮಾಭಾರತಿಯ ಹೇಳಿಕೆಯು ನಾಚಿಕೆಗೇಡು ಎಂದು ಕಾಂಗ್ರೆಸ್‌ ಟೀಸಿದ್ದು, ಅವರು ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದೆ.

“ಅಧಿಕಾರಸ್ಥರು ರಾಜಕಾರಣಿಗಳ ಚಪ್ಪಲಿಗಳನ್ನು ಎತ್ತುತ್ತಾರೆಯೇ? ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸ್ಪಷ್ಟಪಡಿಸುತ್ತಾರೆಯೇ” ಎಂದು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಕೆ.ಕೆ .ಮಿಶ್ರಾ ಅವರು ಟ್ವೀಟ್‌ ಮಾಡಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ಹಯ್ಯಾ ಕುಮಾರ್, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರುವ ಸಾಧ್ಯತೆ..!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights