ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ!

ಹಣದ ವ್ಯವಹಾರ ವಿಚಾರವಾಗಿ ತನ್ನದೇ ಗ್ರಾಮದ ಯುವಕರೊಂದಿಗೆ ವೈಷಮ್ಯಕ್ಕೆ ಬೆಳೆಸಿಕೊಂಡಿದ್ದ ಬಿಜೆಪಿ ಕಾರ್ಯಕರ್ತನನ್ನು ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಿಕ್ಕಸಂದಗಿ ಬಳಿಯ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.

ಬೂದಿಹಾಳ ಗ್ರಾಮದ ಅನಿಲ ಶರಣಪ್ಪ ಇಂಗಳಗಿ ಎಂಬಾತನನ್ನು  ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಹಣದ ವಿಷಯವಾಗಿ ಗ್ರಾಮದ ಯುವಕರೊಂದಿಗೆ ಮಾತಿನ ಚಕಮಕಿ ನಡೆದಿತ್ತು. ಅದೇ ವೈಷಮ್ಯದಿಂದಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬುಧವಾರ ಮನೆಯಿಂದ ಹೊರಟ ಅನಿಲ, ಗ್ರಾಮದ ಕುಂಬಾರ ಎಂಬುವರ ಹೋಟೆಲ್‌ನಲ್ಲಿ ಉಪಹಾರ ಸೇವಿಸುತ್ತಿದ್ದ. ಆಗ ಏಕಾಏಕಿ ಒಳಬಂದ ಮೂವರು ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ, ಕುತ್ತಿಗೆ, ಹೊಟ್ಟೆ, ಕೈ ಮೇಲೆ ಹರಿತವಾದ ಚಾಕುವಿನಿಂದ ದಾಳಿ ನಡೆಸಿದ್ದರು. ದಾಳಿಯಿಂದ ತಪ್ಪಿಸಿಕೊಂಡು ಹೋಟೆಲಿನಿಂದ ಹೊರ ಓಡಿ ಬಂದರೂ ಆತನನ್ನು ರಸ್ತೆಗೆ ಕೆಡವಿ ಮನಬಂದಂತೆ ಚಾಕುವಿನಿಂದ ಇರಿದಿದ್ದಾರೆ. ಹಾಗಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇಂಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.


Read Also: ಪ್ರವಾಹ ಪರಿಹಾರಕ್ಕೆ ಅಗತ್ಯ ನೆರವು ದೊರೆಯದೇ ಇರುವುದಕ್ಕೆ ಯುಪಿಎ ಸರ್ಕಾರದ ನೀತಿಗಳೇ ಕಾರಣ: ಆರ್ ಅಶೋಕ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights