ಬಂಗಾಳದಲ್ಲಿ BJP ಎರಡಂಕಿ ಸ್ಥಾನ ಗೆಲ್ಲುವುದಿಲ್ಲ; ಗೆದ್ದರೆ ರಾಜಕೀಯ ತೊರೆಯುವೆ: ಪ್ರಶಾಂತ್ ಕಿಶೋರ್

ಪಶ್ಚಿಮ ಬಂಗಾಳದಲ್ಲಿ 2021ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಬಿಜೆಪಿ ಕಸರತ್ತು ನಡೆಸುತ್ತಿದ್ದಾಋಎ. ಇದಕ್ಕಾಗಿ ಈಗಾಗಲೇ ಟಿಎಂಸಿ ಪಕ್ಷದ ಹಲವು ಶಾಸಕರು-ಮುಖಂಡರನ್ನು ಬಿಜೆಪಿಗೆ ಕರೆತಂದಿದೆ. ಬಿಜೆಪಿ ಪರವಾಗಿ ಮಾಧ್ಯಮಗಳೂ ಬ್ಯಾಟಿಂಗ್‌ ಮಾಡುತ್ತಿವೆ. ಇಷ್ಟೆಲ್ಲಾ ನಡೆದರೂ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನಗಳನ್ನು ಗೆಲ್ಲುವುದಿಲ್ಲ. ಒಂದು ವೇಳೆ ಗೆದ್ದರೆ, ತಾವು ರಾಜಕೀಯ ಕ್ಷೇತ್ರವನ್ನು ತೊರೆಯುತ್ತೇನೆ ಎಂದು ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಸವಾಲು ಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ಮಾಧ್ಯಮಗಳ ಭಾರೀ ಪ್ರಚಾರದ ನಡುವೆಯೂ ವಾಸ್ತವದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ಸ್ಥಾನ ಮುಟ್ಟಲು ಹೆಣಗಾಡುತ್ತಿದೆ. ಒಂದು ವೇಳೆ ಅವರು ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇ ಆದಲ್ಲಿ ನಾನು ಈ ಕ್ಷೇತ್ರದಿಂದ ನಿವೃತ್ತಿ ಹೊಂದುತ್ತೇನೆ, ಬರೆದಿಟ್ಟುಕೊಳ್ಳಿ” ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ:ಬಂಗಾಳದ 10 ಶಾಸಕರು bJPಗೆ ಸೇರ್ಪಡೆ; ಒಂಟಿಯಾದ ಮಮತಾ! ಅರಳುವುದೇ ಕಮಲ?

ಈ ಟ್ವೀಟ್‌ ಅನ್ನು ಸೇವ್ ಮಾಡಿಕೊಳ್ಳಿ. ಒಂದು ವೇಳೆ ನನ್ನ ಊಹೆಗಿಂತ ಬಿಜೆಪಿ ಹೆಚ್ಚಿನ ಸಾಧನೆ ಮಾಡಿದರೆ ನಾನು ಈ ಕ್ಷೇತ್ರ ತ್ಯಜಿಸುತ್ತೇನೆ ಎಂದು ಪ್ರಶಾಂತ್ ಕಿಶೋರ್ ಘೋಷಿಸಿದ್ದಾರೆ.

ಪ್ರಶಾಂತ್ ಕಿಶೋರ್ ಭಾರತದ ರಾಜಕೀಯ ಚತುರ ಎಂದು ಹೆಸರು ಪಡೆದವರು. 2013 ರಲ್ಲಿ ನರೇಂದ್ರ ಮೋದಿ ಪರವಾಗಿ ಕೆಲಸ ಮಾಡಿದ್ದ ಅವರು ನಂತರ ಬಿಜೆಪಿಯಿಂದ ದೂರವಾಗಿದ್ದಾರೆ. ಆಂದ್ರದಲ್ಲಿ ಜಗನ್ ಪರ ಮತ್ತು ದೆಹಲಿಯಲ್ಲಿ ಕೇಜ್ರಿವಾಲ್ ಪರ ಸೇರಿದಂತೆ ಹಲವು ಯಶಸ್ವಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಸದ್ಯಕ್ಕೆ ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ತಮಿಳುನಾಡು ಚುನಾವಣೆಯಲ್ಲಿಯೂ ಸಹ ಡಿಎಂಕೆ ಪರವಾಗಿ ಕೆಲಸ ಮಾಡುತ್ತಿದ್ದಾರೆ.

ಜೆಡಿಯು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕಿಶೋರ್ ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಎ ಎನ್‌ಆರ್‌ಸಿ ಪರ ಮತ ಹಾಕಿದನ್ನು ಖಂಡಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರದ ಯುವಜನರಿಗೆ ಉದ್ಯೋಗ ನೀಡುವುದರ ಪರ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ: ಹಕ್ಕಿಗಾಗಿ ಹಾಡು ಹಾಡಿದ ಕಾಶ್ಮೀರಿ ಯುವಕ: ಹಾಡು ಕೇಳಿ ಮನಸೋತ ನೆಟ್ಟಿಗರು; ವಿಡಿಯೋ ನೋಡಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights