BJP ಆಡಳಿತದಲ್ಲಿ ಸುದ್ದು ಮಾಡೋದು ಎರಡೇ; ಒಂದು ಲಂಚ -ಮತ್ತೊಂದು ಮಂಚ: ಕಾಂಗ್ರೆಸ್‌ ವ್ಯಂಗ್ಯ

“ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ. ಒಂದು ಲಂಚ, ಮತ್ತೊಂದು ಮಂಚ” ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಅಶ್ಲೀಲ ಸಿಡಿಬಿಡುಗಡೆಯಾದ ನಂತರ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ. ಒಂದು ಲಂಚ ಮತ್ತೊಂದು ಮಂಚ! ಸಿಡಿ ನಿಜಕ್ಕೂ ನಕಲಿಯೇ ಆಗಿದ್ದರೆ ರಮೇಶ್ ಜಾರಕಿಹೊಳಿಯವರು ದೂರು ನೀಡಲು ಮಿನಾಮೇಷ ಎಣಿಸುತ್ತಿರುವುದೇಕೆ? ಖಾಸಗಿ ಏಜೆನ್ಸಿಗಳ ಮೊರೆ ಹೋಗುವುದೇಕೆ? ಸರ್ಕಾರಿ ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲವೇ ಅಥವಾ BJP v/s BJP ತಿಕ್ಕಾಟದಲ್ಲಿ ತಾವೇ ಬಲಿಯಾಗುವ ಭಯವೇ?” ಎಂದು ಪ್ರಶ್ನಿಸಿದೆ.

”ಸ್ವತಃ ಬಿಜೆಪಿಯ ದಲಿತ ಮಹಿಳೆ ಚಾಂದಿನಿ ನಾಯ್ಕ ಮೇಲಿನ ಬಿಜೆಪಿ ಶಾಸಕ ಸಿದ್ದು ಸವದಿ ಹಲ್ಲೆ ನಡೆಸಿ ಗರ್ಭಪಾತವಾದರೂ ಕ್ರಮ ಕೈಗೊಳ್ಳದ ಸರ್ಕಾರ. ದಲಿತ ಮಹಿಳೆಯ ಪರ ನಿಲ್ಲದ ಬಿಜೆಪಿ. ಬಿಜೆಪಿ ದಲಿತ, ಹಿಂದುಳಿದವರ ವಿರೋಧಿ ಎನ್ನುವುದನ್ನ 16 ನಿಗಮಗಳಿಗೆ ಕೇವಲ 500 ಕೋಟಿ ನೀಡಿ ಬಜೆಟ್‌ನಲ್ಲಿಯೇ ಸಾಬೀತುಪಡಿಸಿದೆ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

Read Also: ಕಾಂಗ್ರೆಸ್‌ನ ಶಿವಮೊಗ್ಗ ಚಲೋ ಹೋರಾಟದಲ್ಲಿ ಗಲಭೆ ಸೃಷ್ಟಿಸಲು BJP ಸಂಚು: ಡಿಕೆಶಿ ಆರೋಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights