ಸಾಲಗಾರರ ಕಾಟಕ್ಕೆ ಹೆದರಿ ರೈತ ಆತ್ಮಹತ್ಯೆ : ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!
ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆ ಸಿರವಾರ ತಾಲೀಕನ ಸಣ್ಣ ಹೊಸೂರು ಗ್ರಾಮದ ನಿವಾಸಿಯಾಗಿರುವ ಬಸ್ಸಯ್ಯ (55) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಗೆ ಆಧಾರವಾಗಿದ್ದ ಬಸ್ಸಯ್ಯನನ್ನು ಕಳೆದುಕೊಂಡು ಕುಟುಂಬಸ್ಥರು ದಿಕ್ಕೇ ತೋಚದಂತಾಗಿದ್ದಾರೆ.
ಬಸ್ಸಯ್ಯ ಆತ್ಮಹತ್ಯೆಗೆ ಕಾರಣವೇನು?
ಈ ಬಾರಿ ಉತ್ತಮ ಬೆಳೆ ನಿರೀಕ್ಷೆಯನ್ನಿಟ್ಟುಕೊಂಡ ಬಸ್ಸಯ್ಯ ಬ್ಯಾಂಕಿನಲ್ಲಿ ಹಾಗೂ ಖಾಸಗಿಯಾಗಿ ಒಟ್ಟು 4 ಲಕ್ಷ ಸಾಲ ಪಡೆದುಕೊಂಡಿದ್ದರು. ಸಾಲ ಪಡೆದ ಹಣವನ್ನು ಉಳಿಮೆಗೆ ಖರ್ಚು ಮಾಡಿದ್ದರು. ಆದರೆ ನಿರೀಕ್ಷೆಯಂತೆ ಬೆಳೆ ಬರಲಿಲ್ಲ. ಈ ವರ್ಷ ಉತ್ತಮ ಇಳುವರಿ ನಿರೀಕ್ಷೆ ಇಲ್ಲದೇ ಸಾಲಕ್ಕೆ ಹೆದರಿದ್ದರು. ಸಾಲಗಾರರ ಕಾಟಕ್ಕೆ ಹೆದರಿದ ಬಸ್ಸಯ್ಯ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಬಗ್ಗೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.