ಪುಲ್ವಾಮದಲ್ಲಿ ಗುಂಡಿನ ದಾಳಿ; ಬಿಜೆಪಿ ಕೌನ್ಸಲರ್‌ ಸಾವು!

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಪುಲ್ವಾಮ ಜಿಲ್ಲೆಯ ಬಿಜೆಪಿ ಪುರಸಭೆಯ ಸದಸ್ಯ ರಾಕೇಶ್ ಪಂಡಿತ್ ಸಾವನ್ನಪ್ಪಿದ್ದಾರೆ.

ತನ್ನ ಸ್ನೇಹಿತನನ್ನು ಭೇಟಿಯಾಗಲು ಟ್ರಾಲ್‍ ಪಯೀನ್‍ಗೆ ರಾಕೇಶ್‌ ಪಂಡಿತ್‌ ತೆರಳಿದ್ದರು. ಈ ವೇಳೆ ಮೂವರು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ರಾಕೇಶ್ ಪಂಡಿತ್ ಸಾವನ್ನಪ್ಪಿದ್ದು, ಅವರ ಸ್ನೇಹಿತನ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಾಕೇಶ್ ಪಂಡಿತ್ ಶ್ರೀನಗರದ ವಸತಿ ಗೃಹದಲ್ಲಿ ವಾಸಿಸುತ್ತಿದ್ದು, ಅವರ ಭದ್ರತೆ ಇಬ್ಬರು ಭದ್ರತಾ ಪಡೆಯ ಸಿಬ್ಬಂದಿಯನ್ನು ಒದಗಿಸಲಾಗಿತ್ತು. ಆದರೆ ತ್ರಾಲ್‍ಗೆ ಹೋಗುತ್ತಿದ್ದ ವೇಳೆ ಭದ್ರತಾ ಸಿಬ್ಬಂದಿಗಳನ್ನು ರಾಕೇಶ್ ಪಂಡಿತ್‍ ಕರೆದೊಯ್ದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ರಾಕೇಶ್ ಪಂಡಿತ್ ಅವರನ್ನು ಹತ್ಯೆಗೈದವರನ್ನು ಶೀಘ್ರವೇ ಹುಡುಕಲಾಗುವುದು. ಕಾಶ್ಮೀರದ ಕಣಿವೆಯಲ್ಲಿರುವ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗುವುದು. ಇದು ಮಾನವೀಯತೆ ಮತ್ತು ಕಾಶ್ಮೀರದ ಹತ್ಯೆಯಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಹೇಳಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿದ್ದು, ಹತ್ಯೆಕೋರರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವು : ಸಂಬಂಧಿಕರಿಂದ 50 ವರ್ಷದ ವೈದ್ಯರ ಮೇಲೆ ಹಲ್ಲೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights