ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್ಡೌನ್; ಮುನ್ಸೂಚನೆ ನೀಡಿದ ಸಚಿವ ಸುಧಾಕರ್
ರಾಜ್ಯದಲ್ಲಿ ಕೊರೊನಾ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಕಳೆದ ವಾರದಿಂದ ಸೆಮಿ ಲಾಕ್ಡೌನ್ ಜಾರಿಯಲ್ಲಿದ್ದರೂ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಯಾವುದೇ ನಿಯಂತ್ರಣ ಸಾಧ್ಯವಾಗಿಲ್ಲ. ಶುಕ್ರವಾರ ರಾಜ್ಯದಲ್ಲಿ 45 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಹತೋಟಿಗೆ ಬಾರದಿದ್ದರೆ ಸಂಪೂರ್ಣವಾಗಿ ಲಾಕ್ಡೌನ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಮುನ್ಸೂಚನೆ ನೀಡಿದ್ದಾರೆ.
ರಾಜ್ಯದ ಜನರು ನಿಯಂತ್ರಣವಾಗಿ ಮನೆಯಲ್ಲಿಯೇ ಉಳಿಯದಿದ್ದರೆ, ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದರೆ ರಾಜ್ಯವನ್ನು ಸಂಪೂರ್ಣ ಲಾಕ್ಡೌನ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
18 ರಿಂದ 44 ವರ್ಷ ವಯಸ್ಸಿನರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು. ಆದರೆ, ಸದ್ಯ ಲಸಿಕೆ ದಾಸ್ತಾನು ಕೊರತೆಯಿದ್ದು, ಈ ವಯಸ್ಸಿನವರಿಗೆ ಲಸಿಕೆ ನೀಡುವುದು ವಿಳಂಬವಾಗಲಿದೆ. ಹೀಗಾಗಿ ಇಂದು (ಶನಿವಾರ) ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಾಯೋಗಿಕವಾಗಿ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ದಾಸ್ತಾನು ಬಂದ ಕೂಡಲೇ ಲಸಿಕೆ ನೀಡಲು ಆರಂಭಿಸಲಾಗುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ.
ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ 18ರಿಂದ 44 ವಯಸ್ಸಿನವರಿಗೆ ನೀಡುವ ಕೊರೊನಾ ಲಸಿಕ ಕಾರ್ಯಕ್ರಮಕ್ಕೆ ಬಿಎಸ್ವೈ ಪ್ರಯೋಗಿಕ ಚಾಲನೆ ನೀಡಲಿದ್ದಾರೆ.
Read Also: ರಾಜ್ಯದ 10 ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಜಯ; BJP ಗೆದ್ದಿದ್ದು ಒಂದು ಮಾತ್ರ!