‘ರಮೇಶ್ ಜಾರಕಿಹೊಳಿ ಲಾಬಿಯಿಂದ ನಾನು ಸಚಿವನಾಗುತ್ತಿಲ್ಲ’ – ಸಿಪಿ ಯೋಗೇಶ್ವರ್

ಇಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೂರಕ್ಕೆ ನೂರು ಕೊಡುತ್ತೇವೆ ಎಂದು ಹೇಳಿದ್ದಾರೆ. ಈ ಹೇಳಿಕೆ ಮೂಲ ಬಿಜೆಪಿಗರಲ್ಲಿನ ಕೆಂಗಣ್ಣಿಗೆ ಗುರಿಯಾಗಿದೆ.

ಸಚಿವ ರಮೇಶ್ ಜಾರಕಿಹೊಳಿ ಸ್ನೇಹಿತ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಲಾಬಿ ನಡೆಸಿದ್ದರು. ಸದ್ಯ ಹೈಕಮಾಂಡ್ ಬಳಿ ‘ಸಾಹುಕಾರನ’ ಲಾಬಿ ವರ್ಕೌಟ್ ಆಗಿದೆ. ಪಕ್ಷದ ನಾಯಕರ ವಿರೋಧದ ಮಧ್ಯೆ ಸಿಎಂ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದಾರೆ.

1 ವಾರ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಸಚಿವ ರಮೇಶ್ ಜಾರಕಿಹೊಳಿ ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ ಎಂದರೆ ತಾವು ಯಾವ ತ್ಯಾಗಕ್ಕೂ ಸಿದ್ದ ಎಂದಿದ್ದರು. ಸದ್ಯ ಈ ಲಾಬಿ ಸಕ್ಸಸ್ ಆಗಿದೆ ಎಂದು ಎಲ್ಲರೂ ನಂಬಿದ್ದರು.

ಆದರೆ ಈ ಬಗ್ಗೆ  ಸಿಪಿ ಯೋಗೇಶ್ವರ ಮಾತನಾಡಿ, ‘ಯಡಿಯೂರಪ್ಪಗೆ ಧನ್ಯವಾದ. ನನ್ನ ಮೇಲೆ ನಂಬಿಕೆ ವಿಶ್ವಾಸ ಇಟ್ಟಿದ್ದಕ್ಕೆ ಅಭಿನಂದನೆ. ರಮೇಶ್ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ನನ್ನ ಸ್ನೇಹಿತ. ಬಿಜೆಪಿ ಸರ್ಕಾರ ಬಂದಾಗಿನಿಂದಾಲು ನನ್ನನ್ನು ಸಂಪುಟ ಸೇರಿಸಿಕೊಳ್ಳಬೇಕು ಎಂದು ಯಡಿಯೂರಪ್ಪ ಮಾತು ಕೊಟ್ಟಿದ್ದರು. ಆದರೆ ಸಮಯ ಕೂಡಿ ಬಂದಿರಲಿಲ್ಲ. ಸದ್ಯ ಆ ಸಮಯ ಬಂದಿದೆ. ನನ್ನ ಮೇಲಿನ ಭರವಸೆಯಿಂದ ನನಗೆ ಮಂತ್ರಿ ಸ್ಣಾನ ಕೊಡಲು ಮುಂದಾಗಿದ್ದಾರೆ. ಹೈಕಮಾಂಡ , ಸಿಎಂ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಹೀಗಾಗಿ ನನಗೆ ಸಚಿವ ಸ್ಥಾನ ಸಿಗುತ್ತಿದೆ. ರಮೇಶ್ ಜಾರಕಿಹೊಳಿಯ ಲಾಬಿಯಿಂದ ನಾನು ಸಚಿವನಾಗುತ್ತಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights