ಮಂಗಳೂರಿನಲ್ಲಿ ಶಾಂತಿ ಕದಡುವ ಯತ್ನ : ಗೋಡೆಯ ಮೇಲೆ ‘ಲಷ್ಕರ್ ಜಿಂದಾಬಾದ್’ ಬರಹ..!
ಕಡಲನಗರಿ ಮಂಗಳೂರಿನಲ್ಲಿ ಶಾಂತಿ ಕದಡುವ ಯತ್ನ ನಡೆದಿದೆ. ಉಗ್ರ ಸಂಘಟನೆಗಳ ಪರ ಗೋಡೆ ಬರಹವೊಂದು ಕಂಡು ಬಂದಿದ್ದು, ಚರ್ಚೆಗೆ ಕಾರಣವಾಗಿದೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿರೋ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಹ್ಯಾಷ್ ಟ್ಯಾಗ್ ಹಾಕಿ ‘ಲಷ್ಕರ್ ಜಿಂದಾಬಾದ್’ ಎಂದು ಕಿಡಿಗೆಡಿಗಳು ಬರೆದಿದ್ದಾರೆ.
ಕಾಂಪೌಂಡ್ ಮೇಲೆ ‘ಡು ನಾಟ್ ಫೋರ್ಸ್ ಅಸ್ ಟು ಇನ್ವೈಟ್ ತಾಲಿಬಾನ್ ಆ್ಯಂಡ್ ಲಷ್ಕರ್ –ಇ-ತೊಯ್ಬಾ ಟು ಡೀಲ್ ವಿತ್ ಸಂಘೀಸ್ ಆ್ಯಂಡ್ ಮನ್ವೇದಿಸ್’ ಎಂದು ಇಂಗ್ಲೀಷ್ ನಲ್ಲಿ ಬರೆಯಲಾಗಿದೆ. ಅಂದರೆ ಸಂಘಿಗಳು ಮತ್ತು ಮನುವಾದಿಗಳ ವಿರುದ್ಧ ಹೋರಾಟಕ್ಕೆ ಲಷ್ಕರ್-ಇ-ತೊಯ್ಬಾ, ತಾಲಿಬಾನ್ ಸಂಘಟನೆಗೆ ಅಹ್ವಾನಿಸಲು ನಮಗೆ ಪ್ರೇರೇಪಿಸಬೇಡಿ ಎಂದಾಗಿದೆ. ಈ ಮೂಲಕ ಲಷ್ಕರ್ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ್ದಾರೆ.
ಸ್ಥಳಕ್ಕೆ ಕದ್ರಿ ಪೊಲೀಸರು ಆಗಮಿಸಿದ್ದು ವಿವಾದಿತ ಬರಹದ ಮೇಲೆ ಪೇಂಟಿಂಗ್ ಮಾಡಿಸಿದ್ದಾರೆ.