ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ : ಭಗವಾನ್ ಮುಖಕ್ಕೆ ಮಸಿ ಬಡಿದ ವಕೀಲೆ..!
ಹಿಂದೂಧರ್ಮದಲ್ಲಿ ದೇವರೆಂದು ಪೂಜಿಸುವ ರಾಮನ ಬಗ್ಗೆ ಕೇವಲವಾಗಿ ಪುಸ್ತಕದಲ್ಲಿ ಬರೆದ ಸಾಹಿತಿ ಭಗವಾನ್ ಅವರ ಮುಖಕ್ಕೆ ಇಂದು ವಕೀಲೆಯೊಬ್ಬರು ಕೋರ್ಟ್ ಆವರಣದಲ್ಲಿ ಮಸಿ ಬಡಿದಿದ್ದಾರೆ.
ಹೌದು… ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ಭಗವಾನ್ ವಿರುದ್ಧ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಇಂದು ಈ ಪ್ರಕರಣದ ಸಂಬಂಧ ಜಾಮೀನು ವಿಚಾರಣೆಗೆ ಭಗವಾನ್ ಕೋರ್ಟ್ ಗೆ ಆಗಮಿಸಿದ್ದರು. ಈ ವೇಳೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ.
ಸದ್ಯ ಮೀರಾ ಅವರು ಭಗವಾನ್ ಅವರ ಮುಖಕ್ಕೆ ಮಸಿ ಬಡಿದ ವೀಡಿಯೋ ವೈರಲ್ ಆಗಿದೆ. “ ಇಷ್ಟು ವಯಸ್ಸಾಗಿದೆ ನಿಮಗೆ, ಇನ್ನೂ ನಾಚಿಕೆಯಾಗಲ್ವಾ? ರಾಮನ ಬಗ್ಗೆ ಧರ್ಮದ ಬಗ್ಗೆ ಮಾತಾನಾಡ್ತೀರಾ ಅಂತಾ ಮಸಿ ಬಳಿದು ಮೀರಾ ಅವಾಜ್ ಹಾಕಿದ್ದಾರೆ. ನಾನು ಏನೇ ಬಂದ್ರೂ ಎದುರಿಸಲು ರೆಡಿ ಎಂದು ಮೀರಾ ಹೇಳಿದ್ದಾರೆ.
ಈ ವೇಳೆ ಕೋರ್ಟ್ ನಲ್ಲಿ ಫ್ರೋ.ಭಗವಾನ್ ಜಾಮೀನು ಪಡೆದುಕೊಂಡರು. ಭಗವಾನ್ ಗೆ ಮಸಿ ಬಡಿದು ತಕ್ಕ ಶಾಸ್ತಿ ಮಾಡಿದ್ದೇನೆ ಎಂದು ಮೀರಾ ರಾಘವೇಂದ್ರ ಟ್ವೀಟ್ ಮಾಡಿ ವೀಡಿಯೋ ಹಂಚಿಕೊಂಡಿದ್ದಾರೆ.
https://twitter.com/MeeraRaghavendr/status/1357233534646112259?ref_src=twsrc%5Etfw%7Ctwcamp%5Etweetembed%7Ctwterm%5E1357233534646112259%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fbhagwan-attacked-with-ink-at-a-court-complex-meera-raghavendra-hindu-religion%2F
ಈ ಹಿಂದೆ ಭಗವಾನ್ ಅವರು ತಮ್ಮ ಪುಸ್ತಕದಲ್ಲಿ ‘ಹಿಂದೂ ಧರ್ಮವೆಂಬುದೇ ಇಲ್ಲ. ಹಿಂದೂ ಧರ್ಮ ಅವಮಾನಕಾರ. ಮಾನ ಮಾರ್ಯಾದೆ ಇದ್ದವರು ಹಿಂದೂ ಧರ್ಮ ಬಳಸಬಾರದು ಎಂದು ಭಗವಾನ್ ಹೇಳಿಕೆ ನೀಡಿದ್ದರು. ಈ ಸಂಬಂಧ 2020ರ ಅಕ್ಟೋಬರ್ 10ರಂದು ಭಗವಾನ್ ವಿರುದ್ಧ ಮೀರಾ ಕ್ರಮಿನಲ್ ಕೇಸ್ ಹೂಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮಸ್ನ್ ಜಾರಿ ಮಾಡಿತ್ತು.