ಕರ್ನಾಟಕ ಬಂದ್ಗೆ ಅನುಮತಿ ಇಲ್ಲ: ಉಲ್ಲಂಘಿಸಿದ್ರೆ ಎನ್ಡಿಎಂಎ ಅಡಿ ಕೇಸ್: ಕಮಲ್ ಪಂತ್
ರೈತ ವಿರೋಧಿ ಭೂಸುಧಾರಣಾ ತಿದ್ದುಪಡಿ ಮಸೂದೆ ಮತ್ತು ಕೃಷಿ ಮಸೂದೆಗಳನ್ನು ವಿರೋಧಿ ರಾಜ್ಯದ ರೈತ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್ಗೆ ಕರೆ ಕೊಟ್ಟಿವೆ. ನಾಳೆಯ ಬಂದ್ಗೆ ಬೆಂಗಳೂರಿನಲ್ಲಿ ಅನುಮತಿ ಕೊಟ್ಟಿಲ್ಲ. ಬಲವಂತವಾಗಿ ಪ್ರತಿಭಟನೆಗೆ ಇಳಿದರೆ, ಅವರ ವಿರುದ್ಧ ಕೊರೊನಾ ಮಾರ್ಗಸೂಚಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ (ಎನ್ಡಿಎಂಎ) ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಸೋಮವಾರದ ಕರ್ನಾಟಕ ಬಂದ್ಗೆ ನಾವು ಯಾವುದೇ ರೀತಿಯ ಅನುಮತಿಯನ್ನು ನೀಡಿಲ್ಲ. ಹೀಗಾಗಿ ಪ್ರತಿಭಟನೆಗೆ ಅನುಮತಿ ಇಲ್ಲ. ಅನುಮತಿ ಇಲ್ಲದ ಸಂದರ್ಭದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವಂತಿಲ್ಲ. ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯಾದರೇ ಪ್ರತಿಭಟನಾಕಾರರೇ ಹೊಣೆ ಹೊರಬೇಕಾಗುತ್ತದೆ. ಈ ಕುರಿತು ಪ್ರತಿಭಟನಾಕಾರರಲ್ಲಿ ಬಾಂಡ್ ಬರೆಸಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಮುಂಜಾಗ್ರತಾ ಕ್ರಮವಾಗಿ 47 ಕೆಎಸ್ಆರ್ಪಿ ತುಕಡಿ, 26 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಬಂದ್ಗೆ ಕಾಂಗ್ರೆಸ್ ಬೆಂಬಲ; ರೈತಪರ ಹೋರಾಟಕ್ಕೆ ಸಿದ್ದ: ಡಿಕೆಶಿ