ಇಂದು ಹತ್ರಾಸ್‌ಗೆ ಭೇಟಿ ನೀಡಲಿರುವ ಪ್ರಿಯಾಂಕಾ, ರಾಹುಲ್ ಗಾಂಧಿ : ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ!

ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೀಡಾದ 19 ವರ್ಷದ ಕುಟುಂಬವನ್ನು ಭೇಟಿ ಮಾಡಲು ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಇಂದು ಯುಪಿ ಯ ಹತ್ರಾಸ್‌ಗೆ ಭೇಟಿ ನೀಡಲಿದ್ದಾರೆ.

19 ವರ್ಷದ ಯುವತಿ ಮಂಗಳವಾರ ನಿಧನರಾದ ಬಳಿಕ ಜಿಲ್ಲೆಯಲ್ಲಿ ತಪ್ಪಿಕಸ್ಥರನ್ನು ಕೂಡಲೇ ಶಿಕ್ಷಿಸುವಂತೆ ಆಕ್ರೋಶ, ಪ್ರತಿಭಟನೆ ಮತ್ತು ನ್ಯಾಯಕ್ಕಾಗಿ ಕರೆ ನೀಡಲಾಗಿದೆ. ನಿರ್ಭಯಾ ತರಹದ ಪ್ರಕರಣ ಇದಾಗಿದೆ ಎಂಬ ಬಗ್ಗೆ ರಾಷ್ಟ್ರ ಆಕ್ರೋಶ ವ್ಯಕ್ತಪಡಿಸಿದರೂ ಯುಪಿ ಪೊಲೀಸರು ಅತ್ಯಾಚಾರಕ್ಕೊಳಗಾದ ಆಕೆಯ ಶವವನ್ನು ಕುಟುಂಬಕ್ಕೂ ನೀಡದೇ ರಾತ್ರಿಯಲ್ಲಿ ದಹನ ಮಾಡಿದೆ.

ಆದಾಗ್ಯೂ ಯುಪಿ ಪೊಲೀಸರು ‘ಕುಟುಂಬದ ಇಚ್ಚೆಯಂತೆ ಅಂತ್ಯಕ್ರಿಯೆ ನಡೆದಿದೆ’ ಎಂದು ಹೇಳಿದ್ದಾರೆ. ಅವರ ಕೊನೆಯ ವಿಧಿವಿಧಾನಗಳನ್ನು ಕುಟುಂಬ ನೋಡದಿದ್ದಂತೆ, ಸಾರ್ವಜನಿಕರ ಆಕ್ರೋಶ ಮುಗಿಲು ಮುಟ್ಟಿದೆ. ಪ್ರತಿಪಕ್ಷಗಳು ಸರ್ಕಾರದ ಮೇಲೆ ಸಂಪೂರ್ಣ ದಾಳಿ ನಡೆಸಿವೆ.

ಸಿಎಂ ಯೋಗಿ ಆದಿತ್ಯನಾಥ್ ಅವರ ರಾಜೀನಾಮೆಗೆ ಒತ್ತಾಯಿಸಿವೆ. ಈ ಮಧ್ಯೆ ಉತ್ತರ ಪ್ರದೇಶ ಸರ್ಕಾರ ಈ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights