ರಾಯಚೂರು: ತಾನೇ ಚಲಾಯಿಸುತ್ತಿದ್ದ ಟ್ರಾಕ್ಟರ್‌ ಕೆಳಗೆ ಸಿಲುಕಿ ಚಾಲಕ ಸಾವು

ತಾನೇ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಚಾಲಕರೊಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಡೆದಿದೆ.

ಟ್ರ್ಯಾಕ್ಟರ್ ಚಾಲಕ ಆಂಜನೇಯ (30) ಅವರು ಟ್ರಾಕ್ಡರ್‌ ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳ, ಹಂಪ್‌ನಲ್ಲಿ ಟ್ರಾಕ್ಟರ್‌ ಜಂಪ್‌ ಆದಾಗ ಆಂಜನೇಯ ಅವರು ಟ್ರಾಕ್ಟರ್‌ನಿಂದ ಕೆಳಗೆ ಬಿದ್ದಿದ್ದಾರೆ. ಅವರು ಟ್ರಾಕ್ಟರ್‌ನ ಹಿಂದಿನ ಚಕ್ರಕ್ಕೆ ಸಿಕ್ಕಿಕೊಂಡಿದ್ದಾರೆ. ಟ್ರಾಕ್ಟರ್‌ ಅವರ ದೇಹವನ್ನು 100 ಮೀ.ಗಳಷ್ಟು ದೂರ ಎಳೆದೊಯ್ದಿದೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಂಜನೇಯ ಅವರು ಟ್ರ್ಯಾಕ್ಟರ್‌ನಲ್ಲಿ ಮರ ತುಂಬಿಸಿಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ದುರಂತ ಸಂಭವಿಸಿದೆ. ಅವರ ದೇಹವನ್ನು 100 ಮೀ ಎಳೆದೊಯ್ದ ಟ್ರಾಕ್ಟರ್‌ ಒಂದು ಆಟೋ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದಿದೆ. ನಂತರ, ಫರ್ಟಿಲೈಜರ್ ಅಂಗಡಿಯೊಂದರ ಮುಂದೆ ಹೋಗಿ ನಿಂತಿದೆ.

ಅದೃಷ್ಟವಶಾತ್‌ ಆ ವೇಳೆ ರಸ್ತೆಯಲ್ಲಿ ಸಾರ್ವಜನಿಕರು ಇರಲಿಲ್ಲವಾದ್ದರಿಂದ ಬೇರೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights