ಇಂದಿನಿಂದ ಮತ್ತೆ 10 ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಲಿದೆ: ಹವಾಮಾನ ಇಲಾಖೆ ಎಚ್ಚರಿಕೆ!
ಕಳೆದ ಒಂದು ತಿಂಗಳಿನಿಂದ ಅಬ್ಬರಿಸಿದ್ದ ಮಳೆ, ಸೋಮವಾರ ಬಿಡುವು ನೀಡಿತ್ತು. ಒಂದು ತಿಂಗಳ ನಂತರ ಸೂರ್ಯನ ದರ್ಶನ ಪಡೆದ ಜನರು ಮಳೆಯ ಅಬ್ಬರ ಮುಗಿಯಿತು ಎಂದು ನಿಟ್ಟುಸಿರು ಬಿಟ್ಟಿದ್ದರು. ಆದರೆ, ಇದೀಗ, ಮಂಗಳವಾರದಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಹೇಳಿದ್ದು, ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ.
ಇಂದಿನಿಂದ ಮತ್ತೆ ಕೆಲವು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಮಾನ ತಜ್ಞರು ಎಚ್ಚರಿಕೆ ನೀಡಿದ್ಧಾರೆ.
ಬೆಂಗಳೂರಿನಲ್ಲಿ ಬೆಳಗ್ಗೆ ಸೂರ್ಯನ ಬಿಸಿಲು ಹೆಚ್ಚಾಗಿತ್ತು. ಆದರೆ, ಮಧ್ಯಾಹ್ನದ ವೇಳೆಗೆ ಮತ್ತೆ ಮೋಡ ಕವಿದಿದ್ದು, ಮಳೆ ಬೀಳುವ ವಾತಾವರಣ ಸೃಷ್ಟಿಯಾಗಿದೆ.
ಇದನ್ನೂ ಓದಿ: ಮತ್ತೊಬ್ಬರ ಜೀವ ಉಳಿಸಲು ಅಪಘಾತ ಮಾಡಿದ ಚಾಲಕ; ವಿಡಿಯೋ ವೈರಲ್