ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ರಾಜಕೀಯ ತೊರೆಯುತ್ತೇನೆ’: ಕೇಂದ್ರ ಸಚಿವ ಬಬುಲ್‌ ಸುಪ್ರಿಯೋ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಸೋಲುಂಡಿದ್ದ ಸಂಸದ, ಕೇಂದ್ರ ಸಚಿವ ಬಬುಲ್‌ ಸುಪ್ರಿಯೋ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದು, ರಾಜಕೀಯ ತೊರೆಯುತ್ತೇನೆ ಎಂದು ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳದ ಅಸಾನ್ಸೋಲ್ ಕ್ಷೇತ್ರದ ಸಂಸದರಾದ ಬಬುಲ್‌ ಸುಪ್ರಿಯೋ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರಾಗಿದ್ದಾರೆ. ಇದೀಗ ಅವರು ರಾಜಕೀಯ ಕ್ಷೇತ್ರ ತೊರೆಯುವುದಾಗಿ ಘೋಷಿಸಿದ್ದಾರೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ತಂದೆ-ತಾಯಿ-ಹೆಂಡತಿ-ಮಗಳು ಮತ್ತು ಇಬ್ಬರು ಆತ್ಮೀಯ ಸ್ನೇಹಿತರೂ ಸೇರಿದಂತೆ ಎಲ್ಲರ ಮಾತುಗಳನ್ನು ಕೇಳಿದ್ದೇನೆ. ಆದರೆ ನಾನು ಟಿಎಂಸಿ, ಕಾಂಗ್ರೆಸ್, ಸಿಪಿಐಎಂ ಸೇರಿದಂತೆ ಯಾವುದೇ ಪಕ್ಷ ಸೇರುವುದಿಲ್ಲ. “ನಾನು ನಿರ್ಗಮಿಸುತ್ತೇನೆ.. ಧನ್ಯವಾದಗಳು..” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕಾದಲ್ಲಿ ರದ್ದಾಗಲಿದೆ ಒಪಿಟಿ ಕಾಯ್ದೆ?; 80 ಸಾವಿರ ಭಾರತೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!

ನೀವು ಸಾಮಾಜ ಸೇವೆ ಮಾಡುವುದಾದರೆ ರಾಜಕೀಯಕ್ಕೆ ಸೇರದೆ ಮಾಡಬಹುದು. ನಾನು ಮೊದಲು ನನ್ನನ್ನು ಸಂಘಟಿಸಿಕೊಳ್ಳುತ್ತೇನೆ ಮತ್ತೆ ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

ನಾನು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಪ್ರೀತಿಯನ್ನು ತೋರಿಸಿದ್ದಕ್ಕಾಗಿ ಅಮಿತ್ ಶಾ ಮತ್ತು ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ. “ನಾನು ಯಾವುದೇ ಬ್ಲಾಕ್‌ಮೇಲ್ ಮಾಡಲು ಅತವಾ ಉನ್ನತ ಅಧಿಕಾರ ಪಡೆಯಲು ಈ ನಿರ್ಣಯ ತೆಗೆದುಕೊಂಡಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಾಲಿವುಡ್ ಗಾಯಕರಾದ ಅವರು 2014 ರಲ್ಲಿ ಬಿಜೆಪಿ ಸೇರಿದ್ದರು. ನರೇಂದ್ರ ಮೋದಿ ಸಂಪುಟದಲ್ಲಿ ಗ್ರಾಮೀಣ ಅಭಿವೃದ್ದಿ ರಾಜ್ಯ ಸಚಿವರಾಗಿದ್ದ ಅವರನ್ನು ಇತ್ತೀಚೆಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರಾಗಿ ಬದಲಾವಣೆ ಮಾಡಲಾಗಿತ್ತು. ಇದೇ ಅವರ ರಾಜೀನಾಮೆಗೆ ಕಾರಣವಿರಬಹುದು ಎಂಬ ಚರ್ಚೆಗಳು ಆರಂಭವಾಗಿವೆ.

ಇದನ್ನೂ ಓದಿ: ಸುಳ್ಳು ಲೆಕ್ಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿಗಳ ಬೃಹತ್ ದೇಶದ್ರೋಹೀ ಭ್ರಷ್ಟಾಚಾರ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights