ಹತ್ರಾಸ್ ಅತ್ಯಾಚಾರ: ಎಸ್ಪಿ, ಡಿಎಸ್ಪಿ, ಎಸ್ಐ ಅಮಾನತಿಗೆ ಆದೇಶ!
ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್ ಪೊಲೀಸ್ ವರಿಷ್ಠಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇನ್ಸ್ಪೆಕ್ಟರ್ ಸೇರಿದಂತೆ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸಲು ಯುಪಿ ಸಿಎಂ ಆದೇಶಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಪ್ರಾಥಮಿಕ ತನಿಖಾ ವರದಿಯನ್ನು ಪೊಲೀಸರು ಸರಿಯಾಗಿ ನಿರ್ವಹಿಸಿಲ್ಲ ಎಂದು ವಿಶೇಷ ತನಿಖಾ ತಂಡ (SIT)ಯ ಆರೋಪಿಸಿದ್ದು, ಅಮಾನತು ಗೊಳಿಸುವಂತೆ ಒತ್ತಾಯಿಸಿತ್ತು. ಎಸ್ಐಟಿ ಒತ್ತಾಯದ ಮೇರೆಗೆ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ಹೊರಡಿಸಿರುವ ಸರ್ಕಾರ, ಪ್ರಕರಣವನ್ನು ನಾರ್ಕೊ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದೆ.
ಹತ್ರಾಸ್ನಲ್ಲಿ ಸೆಪ್ಟೆಂಬರ್ 14 ರಂದು 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮತ್ತು ಕ್ರೂರ ಹಲ್ಲೆ ನಡೆಸಲಾಗಿತ್ತು. ಆಕೆ, ಸೆ.28 ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಆಕೆಯ ಸಾವಿನ ನಂತರ ದೇಶಾದ್ಯಂತ ದೌರ್ಜನ್ಯ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಯುಪಿ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲು ಆದೇಶಿಸಿದೆ.
Read Also: ರಾಹುಲ್-ಪ್ರಿಯಾಂಕಾ ಸೇರಿ 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು!