ರಾಕಿಂಗ್ ಸ್ಟಾರ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸೂಪರ್ ಸ್ಟಾರ್..!

ಕೊರೊನಾ ವೈರಸ್ ಒಕ್ಕರಿಸಿದ ಬಳಿಕ ಸಿನಿಮಾಮಂದಿ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಸ್ಯಾಂಡಲ್ ವುಡ್ ಸ್ಟಾರ್ ಗಳು ಸಿನಿ ಕಾರ್ಮಿಕರಿಗೆ ಸಹಾಯ ಹಸ್ತ ಚಾಚುವ ಮೂಲಕ ನೆರವಾಗುತ್ತಿದ್ದಾರೆ. ಸ್ಯಾಂಡಲ್ ವುಡ್ ನಟ ಯಶ್ ಕೂಡ ಸಿನಿ ಕಾರ್ಮಿಕರಿಗೆ ನೆರವಾಗಿದ್ದು, ನಟ ಉಪೇಂದ್ರ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲಾಕ್ ಡೌನ್ ನಿಂದ ಕಂಗಲಾಗಿದ್ದ ಸಿನಿ ಕಾರ್ಮಿಕರಿಗೆ ಉಪೆಂದ್ರ ಕೂಡ ನೆರವು ನೀಡಿದ್ದಾರೆ. ಜೊತೆಗೆ ಕೊರೊನಾ ಆರ್ಥಿಕ ಸಂಕಷ್ಟದಲ್ಲಿರುವ ಸಿನಿಮಂದಿಗೆ ಆರ್ಥಿಕ ನೆರವು ನೀಡುವುದಾಗಿ ನಿನ್ನೆ ರಾಕಿಂಗ್ ಸ್ಟಾರ್ ಯಶ್ ಘೋಷಿಸಿದ್ದರು. ಈ ನಿರ್ಧಾರಕ್ಕೆ ನಟ ಉಪೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಲಾವಿದರಿಗೆ, ತಂತ್ರಜ್ಞರಿಗೆ ವೈಯಕ್ತಿಕವಾಗಿ ತಲಾ 5000 ರೂ.ಗಳನ್ನು ನೀಡುವುದಾಗಿ ತಿಳಿಸಿದ್ದ ಯಶ್ ಮಹತ್ಕಾರ್ಯಕ್ಕೆ ಸದ್ಯ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಂಕಷ್ಟದಲ್ಲಿರುವವರಿಗೆ ಈ ಹಣ ನೆರವಾಗಲಿದೆ ಎಂದು ಯಶ್ ಹೇಳಿಕೊಂಡಿದ್ದು ಈ ಹಣ ನೇರವಾಗಿ ಅವರ ಖಾತೆಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದರು.

ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಉಪ್ಪಿ ಯಶ್ ನಿಮ್ಮದು ಉತ್ತಮವಾದ ನಿರ್ಧಾರ ಇಂತಹ ಮಹತ್ಕಾರ್ಯಗಳನ್ನು ಮತ್ತಷ್ಟು ಮಾಡುವ ಶಕ್ತಿ ಭಗವಂತ ನಿಮಗೆ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights