ಪ್ರೀತಿಸಿದವಳನ್ನೇ ಕೊಲ್ಲಲು ತಲವಾರ್ ಹಿಡಿದ ಪ್ರೇಮಿ : ಮೂರು ಬಾರಿ ಹಲ್ಲೆ!

ಬೇಡ.. ನನಗೆ ಏನೂ ಮಾಡಬೇಡ.. ಬಿಟ್ಟುಬಿಡು.. ಹೀಗೆ ಏನೆಂದರೂ ಕಿವಿಗೆ ಹಾಕಿಕೊಳ್ಳದ ಹುಚ್ಚು ಪ್ರೇಮಿಯೊಬ್ಬ ಪ್ರಿಯತಮೆಯನ್ನು ಕೊಲ್ಲಲು ತಲವಾರ ಹಿಡಿದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.

ಕುಂದಗೋಳ ತಾಲೂಕಿನ ಕುಂಕುರ ಗ್ರಾಮದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ ಇಮ್ತಿಯಾಜ್ ಈ ನಡೆ ಸಾರ್ವಜನಿಕರಲ್ಲಿ ಆಂತಕ ಮೂಡಿಸಿದೆ. ಮಾಸ್ಕ್ ಹಾಕಿಕೊಂಡು ಹೋಗುತ್ತಿದ್ದ ಯುವತಿ ಮೇಲೆ ಇಮ್ತಾಯಾಜ್ ಏಕಾಏಕಿ ದಾಳಿ ಮಾಡಿ ಅವಾಚ್ಯ ಶಬ್ದಗಳಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ತಲಾವರ್ ನಿಂದ ಮೂರು ಬಾರಿ ಆಕೆಯ ಕುತ್ತಿಗೆ ಭಾಗಕ್ಕೆ ಹೊಡೆದಿದ್ದಾನೆ. ಈ ಘಟನೆಯಿಂದ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಅಷ್ಟಕ್ಕೂ ಆಗಿದ್ದೇನು..?

ಇಮ್ತಿಯಾಜ್ ಕಳೆದ ಕೆಲ ವರ್ಷಗಳಿಂದ ಯುವತಿಯನ್ನು ಪ್ರತೀಸುತ್ತಿದ್ದ. ಇದಕ್ಕೆ ಯುವತಿಯ ಸಹಮತವೂ ಇತ್ತು ಎಂದು ಆರೋಪಿ ವಿಚಾರಣೆ ವೇಳೆ ಹೇಳಿದ್ದಾನೆ. ಆದರೆ ಈ ನಡುವೆ ಯುವತಿ ತನ್ನ ಪ್ರೀತಿಯನ್ನು ಕಡೆಗಣಿಸಲು ಪ್ರಯತ್ನಿಸಿದ್ದಾಳೆ. ಇದಕ್ಕೆ ಸೂಕ್ತ ಕಾರಣವನ್ನೂ ಯುವತಿ ನೀಡಿರಲಿಲ್ಲ. ಆದರೆ ಈ ಬಗ್ಗೆ ಎಷ್ಟೋ ಬಾರಿ ಇಮ್ತಿಯಾಜ್ ಸಮಾಧಾನದಿಂದ ಪ್ರಶ್ನಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಇದರಿಂದ  ಬೇಸರಗೊಂಡ ಇಮ್ತಿಯಾಜ್ ತಲವಾರ್ ನಿಂದ ಯುವತಿಯ ಕೊಲೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕಂಡ ಸ್ಥಳಿಯ ಷುರುಷರು ಯುವಕನಿಂದ ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಲಕ್ಕೆ ಬಂದ ಪೊಲೀಸರು ಪಾಗಲ್ ಪ್ರೇಮಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights